ಬ್ರೇಕಿಂಗ್ ನ್ಯೂಸ್
17-09-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 17 : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿbಚಲಿಸುತ್ತಿದ್ದ ರಾಜಹಂಸ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು ಆತನ ಸಮಯ ಪ್ರಜ್ಞೆ ಹಾಗೂ ಮಾನವೀಯ ತೆಯಿಂದ 45ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಬಿರಾದಾರ್ (50) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸುಮಾರು 20ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಂಗಳೂರು ಮೆಜೆಸ್ಟಿಕ್ನಿಂದ ದಾವಣಗೆರೆಯ ಹರಿಹರಕ್ಕೆ ನೆಲಮಂಗಲ ಮಾರ್ಗವಾಗಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಚಾಲಕ ರಾಜೀವ್ ಬಿರಾದಾರ್ಗೆ ಹೃದಯಾಘಾತವಾಗಿದೆ, ತಕ್ಷಣ ಆತ ಬಸ್ ಅನ್ನು ಹೆದ್ದಾರಿಯಲ್ಲಿನ ಎಡಭಾಗಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ.
ತಕ್ಷಣ ಪ್ರಯಾಣಿಕರು 108ಕ್ಕೆ ಕರೆ ಮಾಡಿ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿದ್ದು ಆ್ಯಂಬುಲೆನ್ಸ್ನಲ್ಲಿ ಪ್ರಥಮ ಚಿಕಿತ್ಸೆ ಸಿಗದೆ ಮಾರ್ಗ ಮಧ್ಯೆ ರಾಜೀವ್ ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಅವರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಲಕನ ಸಮಯ ಪ್ರಜ್ಞೆ:
ಚಾಲಕ ರಾಜೀವ್ ಹೃದಯಾಘಾತ ವಾದ ತಕ್ಷಣ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ರಕ್ಷಣೆ ನೀಡುವ ಕೆಲಸವನ್ನು ಸಾಯುವ ಸಮಯದಲ್ಲಿ ತೋರಿದ್ದಾರೆ. ಈ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಚಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.
In a heartbreaking yet heroic incident, a KSRTC (Karnataka State Road Transport Corporation) driver died of a heart attack while driving a Rajahamsa bus, but not before saving the lives of over 45 passengers with his presence of mind and sense of duty.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm