ಬ್ರೇಕಿಂಗ್ ನ್ಯೂಸ್
17-09-25 06:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 17 : ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿbಚಲಿಸುತ್ತಿದ್ದ ರಾಜಹಂಸ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು ಆತನ ಸಮಯ ಪ್ರಜ್ಞೆ ಹಾಗೂ ಮಾನವೀಯ ತೆಯಿಂದ 45ಕ್ಕೂ ಹೆಚ್ಚು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ರಾಜೀವ್ ಬಿರಾದಾರ್ (50) ಹೃದಯಾಘಾತದಿಂದ ಮೃತಪಟ್ಟ ಚಾಲಕ. ಇವರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಸುಮಾರು 20ವರ್ಷಗಳಿಂದ ಕೆಎಸ್ಆರ್ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಮಂಗಳವಾರ ಬೆಂಗಳೂರು ಮೆಜೆಸ್ಟಿಕ್ನಿಂದ ದಾವಣಗೆರೆಯ ಹರಿಹರಕ್ಕೆ ನೆಲಮಂಗಲ ಮಾರ್ಗವಾಗಿ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ನೆಲಮಂಗಲ ಸಮೀಪದ ಜಾಸ್ ಟೋಲ್ ಬಳಿ ಚಾಲಕ ರಾಜೀವ್ ಬಿರಾದಾರ್ಗೆ ಹೃದಯಾಘಾತವಾಗಿದೆ, ತಕ್ಷಣ ಆತ ಬಸ್ ಅನ್ನು ಹೆದ್ದಾರಿಯಲ್ಲಿನ ಎಡಭಾಗಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ.
ತಕ್ಷಣ ಪ್ರಯಾಣಿಕರು 108ಕ್ಕೆ ಕರೆ ಮಾಡಿ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಿದ್ದು ಆ್ಯಂಬುಲೆನ್ಸ್ನಲ್ಲಿ ಪ್ರಥಮ ಚಿಕಿತ್ಸೆ ಸಿಗದೆ ಮಾರ್ಗ ಮಧ್ಯೆ ರಾಜೀವ್ ಮೃತಪಟ್ಟಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು ಅವರ ಕುಟುಂಬಕ್ಕೆ ಮೃತ ದೇಹವನ್ನು ಹಸ್ತಾಂತರ ಮಾಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಾಲಕನ ಸಮಯ ಪ್ರಜ್ಞೆ:
ಚಾಲಕ ರಾಜೀವ್ ಹೃದಯಾಘಾತ ವಾದ ತಕ್ಷಣ ಚಲಿಸುತ್ತಿದ್ದ ಬಸ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆಯಲ್ಲಿ ನಿಲ್ಲಿಸಿದ ಪರಿಣಾಮ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ರಕ್ಷಣೆ ನೀಡುವ ಕೆಲಸವನ್ನು ಸಾಯುವ ಸಮಯದಲ್ಲಿ ತೋರಿದ್ದಾರೆ. ಈ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಅಲ್ಲದೇ, ಚಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.
In a heartbreaking yet heroic incident, a KSRTC (Karnataka State Road Transport Corporation) driver died of a heart attack while driving a Rajahamsa bus, but not before saving the lives of over 45 passengers with his presence of mind and sense of duty.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm