ಬ್ರೇಕಿಂಗ್ ನ್ಯೂಸ್
18-09-25 05:34 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 18 : ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 2,608.91 ಕೋಟಿ ರೂ. ಬಾಕಿ ಬರಬೇಕಿದೆ! ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥ ಗೊಳಿಸಿದೆ.
ಆದರೂ 2019 ರಿಂದ 2025 ರವರೆಗೆ 4.45 ಕೋಟಿ ಇ-ಚಲನ್ ಪ್ರಕರಣಗಳಿಂದ 2,608.91 ಕೋಟಿ ರೂ. ಬಾಕಿ ಉಳಿದುಕೊಂಡಿದೆ. ಸರ್ಕಾರ 2023ನೇ ಸಾಲಿನಲ್ಲಿ ಶೇ.50 ರಿಯಾಯಿತಿ ಘೋಷಿಸಿ ದಂಡ ಪಾವತಿಗೆ ಆದೇಶ ಮಾಡಿತ್ತು. ಈ ವೇಳೆ 2,64,85,640 ಪ್ರಕರಣಗಳ ಪೈಕಿ 63,15,014 ಕೇಸ್ಗಳನ್ನು ಇತ್ಯರ್ಥಪಡಿಸಿ 182.32 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತ. 2024ನೇ ಸಾಲಿನಲ್ಲಿ 1,28,35,412 ಪ್ರಕರಣಗಳ ಪೈಕಿ 6.18 ಲಕ್ಷ ಇತ್ಯರ್ಥಪಡಿಸಿ 36.03 ಕೋಟಿ ರೂ. ದಂಡ ಸಂಗ್ರಹ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ (2025) ಸರ್ಕಾರ 21 ದಿನಗಳ ಕಾಲ ನೀಡಿದ್ದ ರಿಯಾಯಿತಿ ದಂಡ ಪಾವತಿ ವೇಳೆ 53,11,589 ಪ್ರಕರಣ ಖುಲಾಸೆಗೊಳಿಸಿ 144 ಕೋಟಿ ರೂ. ಸಂಗ್ರಹ ಮಾಡಿದೆ. ಬೆಂಗಳೂರು ನಗರದಲ್ಲಿ ಮಾತ್ರ 106 ಕೋಟಿ ರೂ. ಸಂಗ್ರಹವಾಗಿದೆ. ಇದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಐತಿಹಾಸಿಕ ಸಾಧನೆಯಾಗಿದೆ.
265 ಕೋಟಿ ರೂ. ಪರಿಹಾರ:
ಹಲವು ವರ್ಷಗಳಿಂದ ಬಾಕಿ ಇರುವ ಹಾಗೂ ನ್ಯಾಯಾಲಯದಲ್ಲಿ ನಡೆಯುತ್ತಿರುವ ರಸ್ತೆ ಅಪಘಾತ, ವಾಹನ ಸವಾರರು ಹಾಗೂ ಪಾದಚಾರಿಗಳ ಸಾವು ಸೇರಿ ಇತರ ರಸ್ತೆ ಅವಘಡ ಪ್ರಕರಣಗಳು ಲೋಕ ಅದಾಲತ್ನಲ್ಲಿ ಇತ್ಯರ್ಥಗೊಂಡಿವೆ. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಾಗೂ ಬಾಕಿ ಇದ್ದ 3,708 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಿ 265 ಕೋಟಿ ರೂ. ಪರಿಹಾರವನ್ನು ಸಂತ್ರಸ್ತರಿಗೆ ನೀಡಲಾಗಿದೆ.
ಸಂಚಾರ ನಿಯಮ ಉಲ್ಲಂಘನೆಯಿಂದಾಗಿ ರಾಜ್ಯದಲ್ಲಿ ಬಾಕಿ ಇರುವ 4,45,67,714 ಪ್ರಕರಣಗಳ ಪೈಕಿ 2023 ರಿಂದ 2025ರವರೆಗೆ ರಿಯಾಯಿತಿ ದರದಲ್ಲಿ 1.22 ಕೋಟಿ ಪ್ರಕರಣ ಇತ್ಯರ್ಥಗೊಂಡಿವೆ. ಆದರೂ 3,23,22,160 ಪ್ರಕರಗಳು ಬಾಕಿ ಉಳಿದುಕೊಂಡಿವೆ.
Karnataka has a staggering ₹2,608.91 crore pending in unpaid traffic fines from vehicle users who violated traffic rules across the state. Despite multiple awareness drives and penalty discount schemes, over 3.23 crore cases still remain unresolved.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm