ಬ್ರೇಕಿಂಗ್ ನ್ಯೂಸ್
19-09-25 09:42 am Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹೇಳಿಕೊಳ್ಳಲು ನಮ್ಮೂರು ರಾಜ್ಯ ರಾಜಧಾನಿ, ಆದ್ರೆ ಪ್ರತಿ ರಸ್ತೆಗಳು ಗುಂಡಿಮಯವಾಗಿದೆ. ಐಟಿ-ಬಿಟಿ ಸಿಟಿಯ ಅಭಿವೃದ್ಧಿ ಎಲ್ಲಿ? ಟ್ಯಾಕ್ಸ್ ಹಣ ಏನಾಗ್ತಿದೆ ಎಂದು ಬೆಂಗಳೂರಿಗರು ಪ್ರಶ್ನೆ ಮಾಡ್ತಿದ್ದಾರೆ. ಗುಂಡಿಗಳ ಅವಾಂತರ ಕಂಡು ಐಟಿ ಕಂಪನಿಗಳೇ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ಐಟಿ ದಿಗ್ಗಜರು ಅಸಮಾಧಾನ ಹೊರ ಹಾಕ್ತಿದ್ದಂತೆ ವಿಪಕ್ಷ ನಾಯಕರು ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಅವ್ಯವಸ್ಥೆಗೆ ಸಿಎಂ, ಡಿಸಿಎಂ ನೇರ ಹೊಣೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
'ಬೆಂಗಳೂರು ಈಗ ಗುಂಡಿಯೂರು';
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಗ್ರೇಟರ್ ಬೆಂಗಳೂರು ಎಂದರೆ ಇದೇನಾ?:
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?
ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ.
ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.
ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ.
Once hailed as the pride of Karnataka and India’s premier IT capital, Bengaluru is now grappling with severe infrastructure issues. From crater-filled roads to mounting garbage piles, the city’s crumbling civic conditions have triggered widespread criticism, the latest coming from Union Minister and senior JD(S) leader H.D. Kumaraswamy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am