ಬ್ರೇಕಿಂಗ್ ನ್ಯೂಸ್
19-09-25 09:42 am Bangalore Correspondent ಕರ್ನಾಟಕ
ಬೆಂಗಳೂರು, ಸೆ.19: ಹೇಳಿಕೊಳ್ಳಲು ನಮ್ಮೂರು ರಾಜ್ಯ ರಾಜಧಾನಿ, ಆದ್ರೆ ಪ್ರತಿ ರಸ್ತೆಗಳು ಗುಂಡಿಮಯವಾಗಿದೆ. ಐಟಿ-ಬಿಟಿ ಸಿಟಿಯ ಅಭಿವೃದ್ಧಿ ಎಲ್ಲಿ? ಟ್ಯಾಕ್ಸ್ ಹಣ ಏನಾಗ್ತಿದೆ ಎಂದು ಬೆಂಗಳೂರಿಗರು ಪ್ರಶ್ನೆ ಮಾಡ್ತಿದ್ದಾರೆ. ಗುಂಡಿಗಳ ಅವಾಂತರ ಕಂಡು ಐಟಿ ಕಂಪನಿಗಳೇ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ಐಟಿ ದಿಗ್ಗಜರು ಅಸಮಾಧಾನ ಹೊರ ಹಾಕ್ತಿದ್ದಂತೆ ವಿಪಕ್ಷ ನಾಯಕರು ಕೂಡ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಅವ್ಯವಸ್ಥೆಗೆ ಸಿಎಂ, ಡಿಸಿಎಂ ನೇರ ಹೊಣೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
'ಬೆಂಗಳೂರು ಈಗ ಗುಂಡಿಯೂರು';
ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಗ್ರೇಟರ್ ಬೆಂಗಳೂರು ಎಂದರೆ ಇದೇನಾ?:
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ?
ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ.
ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ!
ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು.
ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ.
Once hailed as the pride of Karnataka and India’s premier IT capital, Bengaluru is now grappling with severe infrastructure issues. From crater-filled roads to mounting garbage piles, the city’s crumbling civic conditions have triggered widespread criticism, the latest coming from Union Minister and senior JD(S) leader H.D. Kumaraswamy.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm