ಬ್ರೇಕಿಂಗ್ ನ್ಯೂಸ್
19-09-25 09:45 am Bangalore Correspondent ಕರ್ನಾಟಕ
ಬೆಂಗಳೂರು, ಸೆ 19 : ಮೋಸದಿಂದಲೇ ಬಿಜೆಪಿ ಚುನಾವಣೆ ಗೆದ್ದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಅಳಂದ ಪ್ರಕರಣ ಆಗಿ ಐದಾರು ವರ್ಷ ಆಯ್ತು. ಈ ವಿಚಾರವಾಗಿ ಎಸ್ ಐ ಟಿ ಯವರು ಚುನಾವಣಾ ಆಯೋಗಕ್ಕೆ ಸಾಕಷ್ಟು ಪತ್ರವನ್ನು ಬರೆದಿದ್ದಾರೆ. ಯಾವ ರೀತಿಯಲ್ಲಿ ಮತಗಳು ಡಿಲೀಟ್ ಆಗಿದೆ ಎಂದು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಉತ್ತರ ನೀಡಲಿಲ್ಲ ಎಂದು ವಿವರಿಸಿದರು.
ಬಿಹಾರದಲ್ಲಿ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಮೋಸದಿಂದಲೇ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಮತ ಕಳ್ಳತನದ ಮೂಲಕವೇ ಚುನಾವಣೆ ಗೆಲ್ಲುತ್ತಿದ್ದರು ಎಂದು ನೇರವಾಗಿ ಆರೋಪಿಸಿದರು.
ಚುನಾವಣಾ ಆಯೋಗ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದರು. ಅದರ ಹಿಂದಿರುವ ಉದ್ದೇಶ ಏನು? ಎಲ್ಲ ಸಂಸ್ಥೆಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಲಾಗಿದೆ. ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಿಡಿಕಾರಿದರು.
ಈಗ ಹೊಸತಾಗಿ ಪ್ರಧಾನಿ ಮೋದಿ ಅವರ ಕುರಿತಾದ ಸಿನಿಮಾ ನೋಡಬೇಕು. ಸಿನಿಮಾ ಈಗಾಗಲೇ ಹಿಂದಿನ ಪ್ರಧಾನಿಗಳು, ಭಗತ್ ಸಿಂಗ್, ಹೋರಾಟಗಾರು ಬಂದು ಹೋಗಿ ಆಯ್ತು. ಆದರೆ ಇವಾಗ ಕೊನೆಗೆ ಇವರ ಸಿನಿಮಾ ನೋಡಬೇಕಾಗಿದೆ. ಏನು ಸಾಧನೆ ಇದೆ ಗೊತ್ತಿಲ್ಲ. ಗೋಡಾ ಹೇ ಮೈದಾನ್ ಹೇ ಎಂಬಂತಾಗಿದೆ ಎಂದು ಕಿಡಿಕಾರಿದರು.
ದೇಶ ಹಾಳಾಗಿ ಹೋಗಬೇಕು. ಒಬ್ಬ ಮನುಷ್ಯ ಪ್ರಸಿದ್ದಿ ಆಗಬೇಕು. ಕೊಳ್ಳೆ ಹೊಡೆದು ಹೋಗಿ. ಪಿಚ್ಚರ್ ನಿಮ್ಮದೇ ಆಯ್ತು ಓಡಿಸಿ ಎಂದು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.
ಅದಾನಿಗೆ ಒಂದು ರೂಪಾಯಿಗೆ ಒಂದು ಸಾವಿರ ಎಕರೆ ನೀಡಲಾಗಿದೆ. ಹತ್ತು ಲಕ್ಷ ಮ್ಯಾಂಗೋ ಪ್ಲ್ಯಾಂಟೇಷನ್ ಇದ್ದದ್ದನ್ನು ಅದಾನಿಗೆ ಕೊಡಲಾಗಿದೆ. ನಮ್ಮ ಸರ್ಕಾರಿ ಕಲ್ಲಿದ್ದಲು ಕಂಪನಿಗೆ ಏಕೆ ಕೊಡಬಾರದು. ಹೊಡಿರಿ ಪಿಚ್ಚರ್, ಮೋದಿ ಸಾಹೇಬ್ರೇ ಮಜಾ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
Karnataka Labour Minister Santosh Lad has launched a scathing attack on the BJP, alleging that the party won elections through fraudulent means and accusing the Election Commission of maintaining silence over serious allegations made by Congress leader Rahul Gandhi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm