ಬ್ರೇಕಿಂಗ್ ನ್ಯೂಸ್
19-09-25 09:45 am Bangalore Correspondent ಕರ್ನಾಟಕ
ಬೆಂಗಳೂರು, ಸೆ 19 : ಮೋಸದಿಂದಲೇ ಬಿಜೆಪಿ ಚುನಾವಣೆ ಗೆದ್ದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಅಳಂದ ಪ್ರಕರಣ ಆಗಿ ಐದಾರು ವರ್ಷ ಆಯ್ತು. ಈ ವಿಚಾರವಾಗಿ ಎಸ್ ಐ ಟಿ ಯವರು ಚುನಾವಣಾ ಆಯೋಗಕ್ಕೆ ಸಾಕಷ್ಟು ಪತ್ರವನ್ನು ಬರೆದಿದ್ದಾರೆ. ಯಾವ ರೀತಿಯಲ್ಲಿ ಮತಗಳು ಡಿಲೀಟ್ ಆಗಿದೆ ಎಂದು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಉತ್ತರ ನೀಡಲಿಲ್ಲ ಎಂದು ವಿವರಿಸಿದರು.
ಬಿಹಾರದಲ್ಲಿ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಮೋಸದಿಂದಲೇ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಮತ ಕಳ್ಳತನದ ಮೂಲಕವೇ ಚುನಾವಣೆ ಗೆಲ್ಲುತ್ತಿದ್ದರು ಎಂದು ನೇರವಾಗಿ ಆರೋಪಿಸಿದರು.
ಚುನಾವಣಾ ಆಯೋಗ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದರು. ಅದರ ಹಿಂದಿರುವ ಉದ್ದೇಶ ಏನು? ಎಲ್ಲ ಸಂಸ್ಥೆಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಲಾಗಿದೆ. ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಿಡಿಕಾರಿದರು.
ಈಗ ಹೊಸತಾಗಿ ಪ್ರಧಾನಿ ಮೋದಿ ಅವರ ಕುರಿತಾದ ಸಿನಿಮಾ ನೋಡಬೇಕು. ಸಿನಿಮಾ ಈಗಾಗಲೇ ಹಿಂದಿನ ಪ್ರಧಾನಿಗಳು, ಭಗತ್ ಸಿಂಗ್, ಹೋರಾಟಗಾರು ಬಂದು ಹೋಗಿ ಆಯ್ತು. ಆದರೆ ಇವಾಗ ಕೊನೆಗೆ ಇವರ ಸಿನಿಮಾ ನೋಡಬೇಕಾಗಿದೆ. ಏನು ಸಾಧನೆ ಇದೆ ಗೊತ್ತಿಲ್ಲ. ಗೋಡಾ ಹೇ ಮೈದಾನ್ ಹೇ ಎಂಬಂತಾಗಿದೆ ಎಂದು ಕಿಡಿಕಾರಿದರು.
ದೇಶ ಹಾಳಾಗಿ ಹೋಗಬೇಕು. ಒಬ್ಬ ಮನುಷ್ಯ ಪ್ರಸಿದ್ದಿ ಆಗಬೇಕು. ಕೊಳ್ಳೆ ಹೊಡೆದು ಹೋಗಿ. ಪಿಚ್ಚರ್ ನಿಮ್ಮದೇ ಆಯ್ತು ಓಡಿಸಿ ಎಂದು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.
ಅದಾನಿಗೆ ಒಂದು ರೂಪಾಯಿಗೆ ಒಂದು ಸಾವಿರ ಎಕರೆ ನೀಡಲಾಗಿದೆ. ಹತ್ತು ಲಕ್ಷ ಮ್ಯಾಂಗೋ ಪ್ಲ್ಯಾಂಟೇಷನ್ ಇದ್ದದ್ದನ್ನು ಅದಾನಿಗೆ ಕೊಡಲಾಗಿದೆ. ನಮ್ಮ ಸರ್ಕಾರಿ ಕಲ್ಲಿದ್ದಲು ಕಂಪನಿಗೆ ಏಕೆ ಕೊಡಬಾರದು. ಹೊಡಿರಿ ಪಿಚ್ಚರ್, ಮೋದಿ ಸಾಹೇಬ್ರೇ ಮಜಾ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
Karnataka Labour Minister Santosh Lad has launched a scathing attack on the BJP, alleging that the party won elections through fraudulent means and accusing the Election Commission of maintaining silence over serious allegations made by Congress leader Rahul Gandhi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm