ಬ್ರೇಕಿಂಗ್ ನ್ಯೂಸ್
19-09-25 09:45 am Bangalore Correspondent ಕರ್ನಾಟಕ
ಬೆಂಗಳೂರು, ಸೆ 19 : ಮೋಸದಿಂದಲೇ ಬಿಜೆಪಿ ಚುನಾವಣೆ ಗೆದ್ದಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಅಳಂದ ಪ್ರಕರಣ ಆಗಿ ಐದಾರು ವರ್ಷ ಆಯ್ತು. ಈ ವಿಚಾರವಾಗಿ ಎಸ್ ಐ ಟಿ ಯವರು ಚುನಾವಣಾ ಆಯೋಗಕ್ಕೆ ಸಾಕಷ್ಟು ಪತ್ರವನ್ನು ಬರೆದಿದ್ದಾರೆ. ಯಾವ ರೀತಿಯಲ್ಲಿ ಮತಗಳು ಡಿಲೀಟ್ ಆಗಿದೆ ಎಂದು ಪ್ರಶ್ನಿಸಿದ್ದರು. ಆದರೆ ಚುನಾವಣಾ ಆಯೋಗ ಉತ್ತರ ನೀಡಲಿಲ್ಲ ಎಂದು ವಿವರಿಸಿದರು.
ಬಿಹಾರದಲ್ಲಿ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಮೋಸದಿಂದಲೇ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲ್ಲುತ್ತಿದ್ದರು. ಮತ ಕಳ್ಳತನದ ಮೂಲಕವೇ ಚುನಾವಣೆ ಗೆಲ್ಲುತ್ತಿದ್ದರು ಎಂದು ನೇರವಾಗಿ ಆರೋಪಿಸಿದರು.
ಚುನಾವಣಾ ಆಯೋಗ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದರು. ಅದರ ಹಿಂದಿರುವ ಉದ್ದೇಶ ಏನು? ಎಲ್ಲ ಸಂಸ್ಥೆಗಳನ್ನು ಇದೇ ರೀತಿಯಲ್ಲಿ ಬಳಕೆ ಮಾಡಲಾಗಿದೆ. ರಾಹುಲ್ ಗಾಂಧಿ ಆರೋಪಕ್ಕೆ ಸ್ಪಷ್ಟ ಉತ್ತರ ಚುನಾವಣಾ ಆಯೋಗ ನೀಡಿಲ್ಲ ಎಂದು ಕಿಡಿಕಾರಿದರು.
ಈಗ ಹೊಸತಾಗಿ ಪ್ರಧಾನಿ ಮೋದಿ ಅವರ ಕುರಿತಾದ ಸಿನಿಮಾ ನೋಡಬೇಕು. ಸಿನಿಮಾ ಈಗಾಗಲೇ ಹಿಂದಿನ ಪ್ರಧಾನಿಗಳು, ಭಗತ್ ಸಿಂಗ್, ಹೋರಾಟಗಾರು ಬಂದು ಹೋಗಿ ಆಯ್ತು. ಆದರೆ ಇವಾಗ ಕೊನೆಗೆ ಇವರ ಸಿನಿಮಾ ನೋಡಬೇಕಾಗಿದೆ. ಏನು ಸಾಧನೆ ಇದೆ ಗೊತ್ತಿಲ್ಲ. ಗೋಡಾ ಹೇ ಮೈದಾನ್ ಹೇ ಎಂಬಂತಾಗಿದೆ ಎಂದು ಕಿಡಿಕಾರಿದರು.
ದೇಶ ಹಾಳಾಗಿ ಹೋಗಬೇಕು. ಒಬ್ಬ ಮನುಷ್ಯ ಪ್ರಸಿದ್ದಿ ಆಗಬೇಕು. ಕೊಳ್ಳೆ ಹೊಡೆದು ಹೋಗಿ. ಪಿಚ್ಚರ್ ನಿಮ್ಮದೇ ಆಯ್ತು ಓಡಿಸಿ ಎಂದು ವ್ಯಂಗ್ಯವಾಗಿ ತರಾಟೆಗೆ ತೆಗೆದುಕೊಂಡರು.
ಅದಾನಿಗೆ ಒಂದು ರೂಪಾಯಿಗೆ ಒಂದು ಸಾವಿರ ಎಕರೆ ನೀಡಲಾಗಿದೆ. ಹತ್ತು ಲಕ್ಷ ಮ್ಯಾಂಗೋ ಪ್ಲ್ಯಾಂಟೇಷನ್ ಇದ್ದದ್ದನ್ನು ಅದಾನಿಗೆ ಕೊಡಲಾಗಿದೆ. ನಮ್ಮ ಸರ್ಕಾರಿ ಕಲ್ಲಿದ್ದಲು ಕಂಪನಿಗೆ ಏಕೆ ಕೊಡಬಾರದು. ಹೊಡಿರಿ ಪಿಚ್ಚರ್, ಮೋದಿ ಸಾಹೇಬ್ರೇ ಮಜಾ ಮಾಡಿ ಎಂದು ತರಾಟೆಗೆ ತೆಗೆದುಕೊಂಡರು.
Karnataka Labour Minister Santosh Lad has launched a scathing attack on the BJP, alleging that the party won elections through fraudulent means and accusing the Election Commission of maintaining silence over serious allegations made by Congress leader Rahul Gandhi.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm