ಬ್ರೇಕಿಂಗ್ ನ್ಯೂಸ್
19-09-25 02:16 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19 : ಜಾತಿ ಗಣತಿ ವಿಚಾರದಲ್ಲಿ ರಾಜ್ಯದ ಪ್ರಮುಖ ಸಚಿವರೇ ಅಸಮಾಧಾನ ಹೇಳಿಕೊಂಡಿದ್ದು ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬಿರುಸಿನ ಚರ್ಚೆಯಾಗಿದೆ. ಕೆಲವು ಲಿಂಗಾಯತ ಸಚಿವರು ಸಿಟ್ಟಿಗೆದ್ದು ಮಾತನಾಡಿದ್ದು ಈ ರೀತಿ ಗೊಂದಲ ಮಾಡಿಕೊಂಡು ಸಮೀಕ್ಷೆ ನಡೆಸುವುದೇ ಬೇಡ. ಗೊಂದಲ ಬಗೆಹರಿಯೋ ವರೆಗೂ ಮುಂದೂಡಿ ಎಂದು ಒತ್ತಡ ಹೇರಿದ್ದಾರೆ.
ಚರ್ಚೆಯ ಸಂದರ್ಭದಲ್ಲಿ ಸಿಟ್ಟಿಗೆದ್ದ ಸಚಿವ ಎಂ.ಬಿ.ಪಾಟೀಲ್, ಜಾತಿ ಗಣತಿ ಮೂಲಕ ಲಿಂಗಾಯತರನ್ನು ತುಂಡು ತುಂಡು ಮಾಡುತ್ತಿದ್ದೀರಿ. ಕುಲಶಾಸ್ತ್ರೀಯ ಅಧ್ಯಯನವನ್ನು ಯಾರು ಮಾಡೋದು. ಇದರಿಂದ ಪಕ್ಷ ಮತ್ತು ಸರ್ಕಾರದ ಇಮೇಜಿಗೆ ಧಕ್ಕೆಯಾಗುತ್ತಿದೆ ಎಂದು ಹೇಳಿ ಟೇಬಲ್ ಗುದ್ದಿ ಧ್ವನಿ ಏರಿಸಿದ್ದಾರೆ. ಈ ವೇಳೆ, ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರೂ ತಮ್ಮ ಆಸನಗಳಿಂದ ಎದ್ದು ನಿಂತು ದನಿಗೂಡಿಸಿದ್ದಲ್ಲದೆ, ಏರಿದ ಧ್ವನಿಯಲ್ಲಿ ಮಾತನಾಡಿದ್ದಾರೆ. ''ಯಾವ ಆಧಾರದ ಮೇಲೆ ಈ ಸಮೀಕ್ಷೆ ಆಗುತ್ತಿದೆ? ಹೊಸ ಜಾತಿಗಳನ್ನು ಏಕೆ ಸೇರಿಸಿದ್ದೀರಿ? ಎಂದು ಖಂಡ್ರೆ ಪ್ರಶ್ನಿಸಿದರೆ, ''ನಮ್ಮ ಜಾತಿ ಯಾವುದು ಗೊತ್ತಾ?,'' ಎಂದು ಮಲ್ಲಿಕಾರ್ಜುನ್ ಕೋಪದಿಂದ ಪ್ರಶ್ನಿಸಿದ್ದಾರೆ. ಈ ಮೂವರು ಸಚಿವರ ವಾದವನ್ನು ಎಚ್.ಕೆ ಪಾಟೀಲ್ ಅವರೂ ಸಮರ್ಥಿಸಿ ಸಮೀಕ್ಷೆಯ ರೂಪುರೇಷೆ ಮತ್ತು ಮಾನದಂಡ ಒಪ್ಪುವಂತದ್ದಲ್ಲ ಎಂದು ಹೇಳಿದರು ಎನ್ನಲಾಗಿದೆ.
ಸಮೀಕ್ಷೆಗೆ 331 ಹೊಸ ಜಾತಿಗಳನ್ನು ಸೃಷ್ಟಿಸಿದ್ದು ಯಾರು? ಏಕೆ? ಹೊಸ ಜಾತಿಗಳನ್ನು ಸೃಷ್ಟಿಸಲು ಅಧಿಕಾರ ಇದೆಯೇ? ಇದರಿಂದ ಲಿಂಗಾಯತ ಮಾತ್ರವಲ್ಲ. ಬೇರೆ ಬೇರೆ ಜಾತಿಗಳಲ್ಲೂ ಗೊಂದಲ ಸೃಷ್ಟಿಯಾಗಿವೆ. ಇದರಿಂದ ಪಕ್ಷ ಮತ್ತು ಸರಕಾರಕ್ಕೆ ತೊಂದರೆಯಾಗಲಿದೆ ಎಂದು ಕೆಲವು ಸಚಿವರು ವಾದಿಸಿದ್ದು, ಈ ಸಮೀಕ್ಷೆಯ ಉಸಾಬರಿಯೇ ಬೇಡ. ಮುಂದೂಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರೂ ಇದೇ ರೀತಿ ಮಾತನಾಡಿದ್ದು ಗೊಂದಲ ಸೃಷ್ಟಿಸಿದರೆ ಅದರಿಂದ ಸರ್ಕಾರಕ್ಕೆ ತೊಂದರೆಯಾಗುತ್ತದೆ. ಜನರಲ್ಲಿ ಅಪನಂಬಿಕೆ ಬರುವಂತೆ ಆಗಬಾರದು ಎಂದು ಹೇಳಿದ್ದಾರೆ. ಕೊನೆಗೆ, ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನಾನು ಮೇಲ್ಜಾತಿ ವಿರೋಧಿ ಎಂದು ಹಣೆಪಟ್ಟಿ ಕಟ್ಟುವಂತೆ ಆಗಿದೆ. ಎಲ್ಲ ಹಿಂದುಳಿದ ಸಮುದಾಯಗಳಿಗೆ ನ್ಯಾಯ ದೊರಕಿಸಲು ಈ ಸಮೀಕ್ಷೆ ಮಾಡಲಾಗುತ್ತಿದೆ. ಸರ್ಕಾರದ ನಡೆಯನ್ನು ಸಚಿವರು ಸಮರ್ಥನೆ ಮಾಡಬೇಕು ಎಂದು ಹೇಳಿದರು. ಕೊನೆಗೆ, ಈ ಕುರಿತ ನಿರ್ಧಾರವನ್ನು ಸಿದ್ದರಾಮಯ್ಯ ತೀರ್ಮಾನಕ್ಕೆ ಬಿಡಲಾಯಿತು.
ಈ ಹಿಂದೆ ಕಾಂತರಾಜ್ ಅಧ್ಯಕ್ಷತೆಯ ಆಯೋಗದ 2015ರ ಸಮೀಕ್ಷಾ ವರದಿ ಮತ್ತು ಈ ವರದಿಯ ದತ್ತಾಂಶ ಆಧರಿಸಿದ ಜಯಪ್ರಕಾಶ್ ಹೆಗ್ಡೆ ವರದಿ ಅಂಗೀಕಾರ ಹಾಗೂ ಜಾರಿ ವಿಚಾರದಲ್ಲಿಯೂ ರಾಜ್ಯ ಸರ್ಕಾರದ ಸಚಿವರಿಂದಲೇ ಅಪಸ್ವರ ಬಂದು ಭಿನ್ನಾಭಿಪ್ರಾಯ ಸೃಷ್ಟಿಯಾಗಿತ್ತು. ಹೊಸ ಸಮೀಕ್ಷೆ ವಿಚಾರದಲ್ಲೂ ಇದೇ ಸ್ಥಿತಿ ಪುನಾವರ್ತನೆಯಾಗಿದೆ.
The proposed caste census in Karnataka has triggered strong discontent within the state cabinet, with some senior ministers openly questioning the methodology and demanding its postponement. Heated exchanges marked Thursday’s cabinet meeting, as several Lingayat ministers strongly opposed the inclusion of new caste categories.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm