ಬ್ರೇಕಿಂಗ್ ನ್ಯೂಸ್
20-09-25 02:59 pm HK News Desk ಕರ್ನಾಟಕ
ಹಾಸನ, ಸೆ.20 : ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳ ಪ್ರಭಾವ ಹೆಚ್ಚುತ್ತಿದ್ದು ವಿಡಿಯೋದಿಂದ ಕೆಲವರಿಗೆ ಲಾಭ ಆಗಿದ್ದರೆ, ಇನ್ನು ಕೆಲವರು ಟ್ರೋಲ್ ಆಗಿ ಬರ್ಬಾದ್ ಆದವರೂ ಇದ್ದಾರೆ. ಹಾಸನದಲ್ಲಿ ಯುವಕನೊಬ್ಬ ಇದೇ ರೀತಿಯ ಟ್ರೋಲ್ ವಿಡಿಯೋಗೆ ಒಳಗಾಗಿ ಸಾವಿಗೀಡಾದ ಘಟನೆ ನಡೆದಿದೆ.
ಅರಕಲಗೂಡು ತಾಲೂಕಿನ ಮೊಸಳೆಹೊಸಳ್ಳಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ಬಿಎ ವಿದ್ಯಾರ್ಥಿಯಾಗಿದ್ದ ಪವನ್ ಕೆ. (21) ಜೀವ ಕಳಕೊಂಡವ. ಸ್ನೇಹಿತೆಯರೊಂದಿಗೆ ಪಾರ್ಕ್ನಲ್ಲಿ ಕುಳಿತಿದ್ದಾಗ ಯುವತಿಯೊಬ್ಬಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಳು. ಇದರಿಂದ ಮನನೊಂದ ಆತ ಮನೆ ಬಳಿಯ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡ ಘಟನೆ ಹಾಸನದ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಇಲ್ಲದ ಪವನ್ನನ್ನು ತಾಯಿ ಪುಟ್ಟಲಕ್ಷ್ಮೀ ಗಾರೆ ಕೆಲಸ ಮಾಡಿ ಸಾಕುತ್ತಿದ್ದಳು. ಮಗನನ್ನು ಕಳಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು.
ಯುವತಿಯ ಕೈ ಹಿಡಿದು ಮಾತನಾಡುತ್ತಿದ್ದ ದೃಶ್ಯವನ್ನು ಅಪರಿಚಿತ ಯುವತಿಯೊಬ್ಬಳು ತನ್ನ ಮೊಬೈಲ್ನಲ್ಲಿ ಸೆರೆಹಿಡಿದಿದ್ದಳು. ನಂತರ ಅದನ್ನು ಇನ್ಸ್ಟಾಗ್ರಾಮ್ನಲ್ಲಿ ಹರಿಬಿಟ್ಟಿದ್ಧು ವಿಡಿಯೋ ವೈರಲ್ ಆಗಿತ್ತು. ವಿಡಿಯೋ ನೋಡಿ ಪವನ್ ಸ್ನೇಹಿತರು ಗೇಲಿ ಮಾಡಿದ್ದರು. ವಿಡಿಯೋಗೆ ಆ ಯುವತಿ ವ್ಯಂಗ್ಯದ ಮಾತುಗಳನ್ನು ಶೀರ್ಷಿಕೆ ಕೊಟ್ಟಿದ್ದಳು. ವಿಡಿಯೋವನ್ನು ಇನ್ಸ್ಟಾಗ್ರಾಮ್ನಿಂದ ತೆಗೆದುಹಾಕಲು ಪ್ರಯತ್ನಿಸಿದ್ದ ಜೀವನ್ ಅದು ಸಾಧ್ಯವಾಗದೆ ನೊಂದುಕೊಂಡಿದ್ದ. ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗಿ ದನದ ಕೊಟ್ಟಿಗೆಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಪವನ್ ಸಾವಿಗೆ ಕಾರಣಳಾದ ಯುವತಿಯನ್ನು ಬಂಧಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Hassan A 21-year-old BA final year student from Mosalehosahalli First Grade College in Arakalagudu taluk died by suicide after a video of him sitting with a girl in a park went viral on social media, reportedly leading to trolling and humiliation.
15-10-25 10:59 pm
Bangalore Correspondent
ದೀಪಾವಳಿಗೆ ಹೆಚ್ಚುವರಿ ರೈಲು ; ಮಂಗಳೂರು- ಬೆಂಗಳೂರು,...
15-10-25 03:35 pm
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
15-10-25 11:02 pm
HK News Desk
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm