ಬ್ರೇಕಿಂಗ್ ನ್ಯೂಸ್
21-09-25 01:28 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.21 : ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವ ಕುರಿತು ಆರೋಪ ಮಾಡಿರುವುದು ಸದ್ದು ಮಾಡಿರುವಾಗಲೇ ಕಲಬುರಗಿ ಜಿಲ್ಲೆ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರ ಪಟ್ಟಿಯಿಂದ ಹೆಸರುಗಳನ್ನು ತೆಗೆಯಲು ಮುಂದಾಗಿದ್ದ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
ಎಡಿಜಿಪಿ ಬಿ.ಕೆ.ಸಿಂಗ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಿಐಡಿ ಎಸ್ ಪಿಗಳಾದ ಸೈದುಲು ಅದಾವತ್, ಶುಭಾನ್ವಿತಾ ಅವರು ತಂಡದ ಸದಸ್ಯರಾಗಿದ್ದಾರೆ. ಉಳಿದಂತೆ ತನಿಖಾ ತಂಡಕ್ಕೆ ಅಗತ್ಯವಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಬೇಕಿದೆ.
ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದರು. ಜತೆಗೆ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಕೆಲವು ದತ್ತಾಂಶ ಒದಗಿಸುವಂತೆ ಚುನಾವಣಾ ಆಯೋಗಕ್ಕೆ 18 ಬಾರಿ ಪತ್ರ ಬರೆದಿದ್ದರೂ ಉತ್ತರ ಸಿಕ್ಕಿಲ್ಲ ಎಂದು ಆರೋಪಿಸಿದ್ದರು. ಇದರ ನಡುವೆಯೇ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಎಸ್ಐಟಿ ರಚಿಸಿದೆ. ಇದುವರೆಗೂ ತನಿಖೆ ನಡೆಸುತ್ತಿದ್ದ ಸಿಐಡಿ ಸೈಬರ್ ಪೊಲೀಸರ ತಂಡದಿಂದ ಎಸ್ಐಟಿಗೆ ಪ್ರಕರಣದ ಕಡತ ವರ್ಗಾವಣೆಯಾಗಲಿದೆ.
ಅಳಂದ ವಿಧಾನಸಭಾ ಕ್ಷೇತ್ರದ ಮತದಾರ ಪಟ್ಟಿಯಿಂದ 6,670 ಮತದಾರರನ್ನು ಅನಧಿಕೃತವಾಗಿ ಕೈ ಬಿಡಲಾಗಿದೆ ಎಂದು ಆರೋಪಿಸಿ ಬಿ.ಆರ್.ಪಾಟೀಲ್ ಅವರು 2023ರ ಚುನಾವಣೆಗೆ ಮುನ್ನ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ದೂರನ್ನು ಗಂಭೀರ ಪರಿಗಣಿಸಿದ್ದ ಮತದಾರರ ನೋಂದಣಾಧಿಕಾರಿಯಾಗಿದ್ದ ಮಮತಾ ಕುಮಾರಿ ಹಾಗೂ ಇತರೆ ಅಧಿಕಾರಿಗಳು, ಆಂತರಿಕ ತನಿಖೆ ನಡೆಸಿದ್ದರು. ಆಗ ಮತದಾರರ ಪಟ್ಟಿಯಿಂದ 5,994 ಮತದಾರರ ಹೆಸರುಗಳನ್ನು ಅಕ್ರಮವಾಗಿ ಕೈಬಿಟ್ಟಿರುವುದು ಗೊತ್ತಾಗಿತ್ತು. ಹೀಗಾಗಿ, ಮಮತಾ ಕುಮಾರಿ ಅವರೇ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿ ಅಳಂದ ಪೊಲೀಸರಿಗೆ ದೂರು ನೀಡಿದ್ದು, 2023ರ ಫೆಬ್ರವರಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯು ಸಿಐಡಿಯ ಸೈಬರ್ ಪೊಲೀಸರಿಗೆ ವರ್ಗವಾಗಿತ್ತು.
The Karnataka government has constituted a Special Investigation Team (SIT) to probe allegations of large-scale voter list manipulation in the Aland Assembly constituency of Kalaburagi district. The move comes in the wake of Congress leader and Leader of Opposition in Lok Sabha, Rahul Gandhi, raising serious concerns about the illegal deletion of voters’ names.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm