ಬ್ರೇಕಿಂಗ್ ನ್ಯೂಸ್
21-09-25 10:23 pm HK News Desk ಕರ್ನಾಟಕ
ಗದಗ, ಸೆ.21 : ಹಲವು ತಿಂಗಳ ಜಗ್ಗಾಟದ ಬಳಿಕ ಪಂಚಮಸಾಲಿ ಲಿಂಗಾಯತ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೆವು ಎಂದು ನೀಲಕಂಠ ಅಸೂಟಿ ಹೇಳಿದರು.
ಪಂಚಮಸಾಲಿಗೆ ಮೀಸಲಾತಿ ವಿಚಾರದಲ್ಲಿ ಸ್ವಾಮೀಜಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರು. ಇತ್ತೀಚೆಗೆ ಕಾಶಪ್ಪನವರ್ ಬಣವು ಸ್ವಾಮೀಜಿ ವಿರುದ್ಧ ತಿರುಗಿ ಬಿದ್ದಿತ್ತು. ಆನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಸವ ಮೃತ್ಯುಂಜಯ ಸ್ವಾಮೀಜಿಯನ್ನು ಇದೀಗ ಪೀಠದಿಂದಲೇ ಕಿತ್ತು ಹಾಕಲಾಗಿದೆ.
ಸ್ವಾಮೀಜಿಗಳ ಬಗ್ಗೆ ಬಹಳಷ್ಟು ಕಂಪ್ಲೆಂಟ್ ಇದ್ದವು. ಟ್ರಸ್ಟ್ ಮಾತು ಕೇಳುತ್ತಿರಲಿಲ್ಲ..ಅವ್ರದು ದೊಡ್ಡ ಫೈಲೇ ಇದೆ. ಈ ಸಭೆಯಲ್ಲಿ ಪೀಠದಿಂದ ಅವ್ರನ್ನ ಉಚ್ಛಾಟಿಸಬೇಕು ಎಂದು ನಿರ್ಣಯ ಆಯ್ತು.. ಟ್ರಸ್ಟ್ ಬೈಲಾದ ವಿರುದ್ಧವಾಗಿ ಆಸ್ತಿ ಮಾಡಿದ್ದಾರೆ. ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ. ಬಹಳ ದಿನದಿಂದ ಕಾಯ್ದಿದ್ದೇವೆ. 2014 ರಲ್ಲಿ ನೋಟಿಸ್ ನೀಡಿದ್ದೇವೆ. ಪೂರ್ಣ ಬಹುಮತದಿಂದ ಟ್ರಸ್ಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬಸವತತ್ವ ನಾವು ಯಾವತ್ತೂ ಹಿಂದೂ ಎನ್ನುವುದಿಲ್ಲ. ಹಿಂದೂ ಧರ್ಮದ ವಿರುದ್ಧವೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ. ಹಿಂದೂ ಧರ್ಮದ ಅನಿಷ್ಠದ ವಿರುದ್ಧ ಅಂತದ್ರಲ್ಲಿ ಈ ಇಬ್ಬರು ಸ್ವಾಮೀಜಿಗಳು ಹಿಂದೂ ಪದ ಬಳಕೆ ಮಾಡ್ತಾರೆ ಅಂದ್ರೆ ಇವರು ಹೇಗೆ ಇರಬೇಕು ಹೇಳಿ. ರಾಜಕೀಯ ಒತ್ತಡದಿಂದ ಅವ್ರು ಹಿಂದೂ ಪದ ಬಳಕೆ ಮಾಡುವಂತೆ ಹೇಳಿದ್ದಾರೆ ಎಂದು ಅಸೂಟಿ ಹೇಳಿದ್ದಾರೆ.
After months of infighting, Basava Jayamrutyunjaya Swamiji has been removed from the post of head of the Panchamasali Lingayat Peetha. The decision was taken by the Akhila Bharat Lingayat Panchamasali Samaj Trust.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am