ಬ್ರೇಕಿಂಗ್ ನ್ಯೂಸ್
21-09-25 10:23 pm HK News Desk ಕರ್ನಾಟಕ
ಗದಗ, ಸೆ.21 : ಹಲವು ತಿಂಗಳ ಜಗ್ಗಾಟದ ಬಳಿಕ ಪಂಚಮಸಾಲಿ ಲಿಂಗಾಯತ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.
ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೆವು ಎಂದು ನೀಲಕಂಠ ಅಸೂಟಿ ಹೇಳಿದರು.
ಪಂಚಮಸಾಲಿಗೆ ಮೀಸಲಾತಿ ವಿಚಾರದಲ್ಲಿ ಸ್ವಾಮೀಜಿ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರು. ಇತ್ತೀಚೆಗೆ ಕಾಶಪ್ಪನವರ್ ಬಣವು ಸ್ವಾಮೀಜಿ ವಿರುದ್ಧ ತಿರುಗಿ ಬಿದ್ದಿತ್ತು. ಆನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಸವ ಮೃತ್ಯುಂಜಯ ಸ್ವಾಮೀಜಿಯನ್ನು ಇದೀಗ ಪೀಠದಿಂದಲೇ ಕಿತ್ತು ಹಾಕಲಾಗಿದೆ.
ಸ್ವಾಮೀಜಿಗಳ ಬಗ್ಗೆ ಬಹಳಷ್ಟು ಕಂಪ್ಲೆಂಟ್ ಇದ್ದವು. ಟ್ರಸ್ಟ್ ಮಾತು ಕೇಳುತ್ತಿರಲಿಲ್ಲ..ಅವ್ರದು ದೊಡ್ಡ ಫೈಲೇ ಇದೆ. ಈ ಸಭೆಯಲ್ಲಿ ಪೀಠದಿಂದ ಅವ್ರನ್ನ ಉಚ್ಛಾಟಿಸಬೇಕು ಎಂದು ನಿರ್ಣಯ ಆಯ್ತು.. ಟ್ರಸ್ಟ್ ಬೈಲಾದ ವಿರುದ್ಧವಾಗಿ ಆಸ್ತಿ ಮಾಡಿದ್ದಾರೆ. ಸಮಾಜ ಒಡೆಯುವ ಕೆಲಸ ಮಾಡ್ತಿದ್ದಾರೆ. ಬಹಳ ದಿನದಿಂದ ಕಾಯ್ದಿದ್ದೇವೆ. 2014 ರಲ್ಲಿ ನೋಟಿಸ್ ನೀಡಿದ್ದೇವೆ. ಪೂರ್ಣ ಬಹುಮತದಿಂದ ಟ್ರಸ್ಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಬಸವತತ್ವ ನಾವು ಯಾವತ್ತೂ ಹಿಂದೂ ಎನ್ನುವುದಿಲ್ಲ. ಹಿಂದೂ ಧರ್ಮದ ವಿರುದ್ಧವೇ ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ. ಹಿಂದೂ ಧರ್ಮದ ಅನಿಷ್ಠದ ವಿರುದ್ಧ ಅಂತದ್ರಲ್ಲಿ ಈ ಇಬ್ಬರು ಸ್ವಾಮೀಜಿಗಳು ಹಿಂದೂ ಪದ ಬಳಕೆ ಮಾಡ್ತಾರೆ ಅಂದ್ರೆ ಇವರು ಹೇಗೆ ಇರಬೇಕು ಹೇಳಿ. ರಾಜಕೀಯ ಒತ್ತಡದಿಂದ ಅವ್ರು ಹಿಂದೂ ಪದ ಬಳಕೆ ಮಾಡುವಂತೆ ಹೇಳಿದ್ದಾರೆ ಎಂದು ಅಸೂಟಿ ಹೇಳಿದ್ದಾರೆ.
After months of infighting, Basava Jayamrutyunjaya Swamiji has been removed from the post of head of the Panchamasali Lingayat Peetha. The decision was taken by the Akhila Bharat Lingayat Panchamasali Samaj Trust.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm