ಬ್ರೇಕಿಂಗ್ ನ್ಯೂಸ್
24-09-25 03:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.24 : ಖ್ಯಾತ ಸಾಹಿತಿ, ಪದ್ಮವಿಭೂಷಣ ಎಸ್.ಎಲ್ ಭೈರಪ್ಪ(94) ಇನ್ನಿಲ್ಲ. ತನ್ನ ಬರವಣಿಗೆಯಿಂದಲೇ ದೇಶ- ವಿದೇಶದಲ್ಲಿ ಓದುಗರನ್ನು ಸೃಷ್ಟಿಸಿದ್ದ ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಕೆಲ ಕಾಲದ ಅಸೌಖ್ಯದ ಬಳಿಕ ನಿಧನರಾದರು.
ವಯಸ್ಸಿನ ಕಾರಣದಿಂದ ಮರೆವಿನ ಕಾಯಿಲೆ ಎದುರಿಸುತ್ತಿದ್ದ ಭೈರಪ್ಪ ಅವರು ಕಳೆದ ಮೂರು ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ನೆಲೆಸಿದ್ದರು. ಇಂಗ್ಲಿಷ್ ಸೇರಿದಂತೆ ಭಾರತದ ವಿವಿಧ ಭಾಷೆಗಳಿಗೆ ಭಾಷಾಂತರಗೊಂಡು ಕನ್ನಡದ ಸಾಹಿತಿಯೊಬ್ಬರು ಕೇವಲ ಬರವಣಿಗೆಯಿಂದಲೇ ಅತಿ ಎತ್ತರಕ್ಕೇರಿದ ವ್ಯಕ್ತಿಯೆಂದರೆ ಎಸ್.ಎಲ್ ಭೈರಪ್ಪ.
ಹಾಸನ ಜಿಲ್ಲೆಯ ಸಂತೇಶಿವರ ಎಂಬಲ್ಲಿ 29-7-1934ರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ್ದ ಭೈರಪ್ಪ ತನ್ನ ಬರವಣಿಗೆಯ ತಾಕತ್ತಿನಿಂದಲೇ ಉತ್ತುಂಗಕ್ಕೇರಿದವರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ಹೊಂದಿದ್ದ ತಂದೆ, ಪ್ಲೇಗ್ ಮಾರಿಯಿಂದ ಇಡೀ ಸಮಾಜ ತತ್ತರಗೊಂಡಿದ್ದಾಗಲೇ ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ಹಂತ ಹಂತವಾಗಿ ಮೇಲಕ್ಕೇರುತ್ತಾ ಹೋಗಿದ್ದರು. ಇವರಿಗೆ 5ನೇ ವಯಸ್ಸಿದ್ದಾಗಲೇ ತಾಯಿ ಪ್ಲೇಗ್ ನಿಂದಾಗಿ ಸಾವು ಕಂಡಿದ್ದರಿಂದ ಅವರ ಜೀವನ ತುಂಬ ಕಷ್ಟಕ್ಕೆ ದೂಡಲ್ಪಟ್ಟಿತ್ತು.
ತನ್ನ 13ನೇ ವಯಸ್ಸಿನಲ್ಲೇ ಗಾಂಧೀಜಿಯ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದವರು ಭೈರಪ್ಪರು. ಆಬಳಿಕ ಮೈಸೂರಿನಲ್ಲಿ ಪ್ರೌಢ ಶಿಕ್ಷಣ, ಪದವಿ ಪೂರೈಸಿದ ಅವರು ಅಲ್ಲಿಯೇ ಎಂಎ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದರು. ಬರೋಡಾದ ವಿವಿಯಿಂದ ಸತ್ಯ ಮತ್ತು ಸೌಂದರ್ಯ ವಿಷಯದಲ್ಲಿ ಇಂಗ್ಲಿಷ್ ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪಡೆದಿದ್ದರು.
ಹುಬ್ಬಳ್ಳಿ, ಗುಜರಾತಿನ ಸರದಾರಿ ಪಟೇಲ್ ವಿವಿ, ದೆಹಲಿಯಲ್ಲಿ ಉಪನ್ಯಾಸಕ ವೃತ್ತಿ ಮಾಡಿದ್ದ ಶಾಸ್ತ್ರೀಯ ಶಿಸ್ತಿನ ಓದಿನ ನಡುವೆ ಕಾದಂಬರಿಗಳನ್ನು ಬರೆಯತೊಡಗಿದ್ದರು. ಆಯಾ ಕಾಲದಲ್ಲಿ ಅವರು ತಮ್ಮದೇ ನೇರ ನೋಟದಲ್ಲಿ ಬರೆದ ಕಾದಂಬರಿಗಳೆಲ್ಲ ತೀವ್ರ ಚರ್ಚೆಗೂ ಒಳಗಾಗಿದೆ. ನಾಲ್ಕು ದಶಕಗಳಲ್ಲಿ ಅವರು 21 ಕಾದಂಬರಿಗಳನ್ನು ಬರೆದಿದ್ದು ಹಲವಾರು ಭಾಷೆಗಳಿಗೆ ಅನುವಾದಗೊಂಡು ಕನ್ನಡದ ಬರಹಕ್ಕೆ ದೇಶಾದ್ಯಂತ ಓದುಗರನ್ನು ಸೃಷ್ಟಿಸಿದ್ದಾರೆ. ಗೃಹ ಭಂಗ, ವಂಶ ವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೇ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ ಮತ್ತು ಮರಾಠಿ ಭಾಷೆಗಳಲ್ಲಿ ಜನಪ್ರಿಯವಾಗಿವೆ.
Celebrated Kannada writer and Padma Vibhushan awardee Santeshivara Lingannaiah Bhyrappa (94) passed away in Bengaluru on Tuesday. He had been undergoing treatment at Rashtrotthana Hospital following age-related ailments.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am