ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm