ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm