ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm