ಬ್ರೇಕಿಂಗ್ ನ್ಯೂಸ್
26-09-25 05:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಸೆ.26 : ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್ದೇವ್ ಅವರನ್ನೂ ಎಫ್ ಐಆರ್ ನಲ್ಲಿ ಸೇರಿಸಲಾಗಿದೆ. ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರಿಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರನ್ನು ಗಂಭೀರ ಪರಿಗಣಿಸಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್ಪಿ) ತನಿಖೆಗೆ ಆದೇಶ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿದೆ. ಈ ಆದೇಶದಂತೆ ಲೋಕಾಯುಕ್ತ ಕಚೇರಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಅನ್ವಯ ರಾಜೇಗೌಡ ಮತ್ತು ಅವರ ಕುಟುಂಬದ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಎಫ್ಐಆರ್ನಲ್ಲಿ ಸೆಕ್ಷನ್ 7 (ಎರಡು ವ್ಯಕ್ತಿಗಳ ನಡುವೆ ಲಾಭಕ್ಕಾಗಿ ಪ್ರಕಟಣೆ), 8 ( ಲಾಭಕ್ಕಾಗಿ ಕೃತ್ಯ), 13 (ಅಧಿಕಾರದ ದುರ್ಬಳಕೆಯಿಂದ ಆಸ್ತಿ ಗಳಿಕೆ), 120(B) (ಕುಟ್ರೆ), 420 (ಮೋಸ), 193 (ಸಾಕ್ಷಿ ಮೋಸ) ಮತ್ತು 200 (ತಪ್ಪು ದೂರು) ಅಡಿಯಲ್ಲಿ ಆರೋಪಗಳನ್ನು ಹೊರಿಸಲಾಗಿದೆ.
The Lokayukta Police in Chikkamagaluru have registered an FIR against Sringeri Congress MLA T.D. Rajegowda, his wife Pushpa, and son Rajdev, on charges of corruption, misuse of power, and tax evasion.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am