ಬ್ರೇಕಿಂಗ್ ನ್ಯೂಸ್
26-09-25 07:39 pm HK News Desk ಕರ್ನಾಟಕ
ಮೈಸೂರು, ಸೆ.26 : ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು.
ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು, ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಉದಯೋನ್ಮುಖ ಲೇಖಕಿ ಸಹನಾ ವಿಜಯ್ ಕುಮಾರ್ ಉಪಸ್ಥಿತರಿದ್ದರು. ಅಂತಿಮ ವಿಧಿ ವಿಧಾನಗಳ ಬಳಿಕ ಪುತ್ರರ ಜೊತೆಗೆ ಸಹನಾ ವಿಜಯ್ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಲ್ಲಿಗೆ ಎಸ್.ಎಲ್ ಭೈರಪ್ಪ ಅವರ ದೇಹವು ಪಂಚಭೂತಗಳಲ್ಲಿ ಲೀನವಾಯಿತು.
![]()



ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯ ಸಂಸ್ಕಾರ ನಡೆಯಿತು. ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು. ನಿನ್ನೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ನಮನಕ್ಕೆ ಇರಿಸಲಾಗಿತ್ತು. ಅಂತಿಮ ದರ್ಶನ ಪಡೆದಿದ್ದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಭೈರಪ್ಪನವರ ಪ್ರತಿಮೆ ಸ್ಥಾಪಿಸುವುದಾಗಿ ಹೇಳಿದ್ದರು.
ಇದಕ್ಕು ಮುನ್ನ ತನ್ನ ಅಂತ್ಯ ಸಂಸ್ಕಾರದ ಬಗ್ಗೆ ಭೈರಪ್ಪನವರು ವಿಲ್ ಬರೆದಿದ್ದಾರೆಂದು ಸುದ್ದಿ ಹಬ್ಬಿತ್ತು.ಅದರಲ್ಲಿ ತನ್ನ ಅಂತ್ಯಸಂಸ್ಕಾರವನ್ನು ಮಕ್ಕಳು ಮಾಡುವುದು ಬೇಡ, ಲೇಖಕಿ ಸಹನಾ ವಿಜಯಕುಮಾರ್ ಮಾಡಬೇಕು ಎಂದು ಬರೆದಿಡಲಾಗಿತ್ತು. ಈ ವಿಲ್ ಪ್ರತಿ ಜಾಲತಾಣದಲ್ಲಿ ಪ್ರಚಾರ ಪಡೆದಿತ್ತು. ಅವರ ಕೋರಿಕೆಯಂತೆ ಇಂದು ಇಬ್ಬರು ಪುತ್ರರ ಜೊತೆಗೆ ಸಹನಾ ಅವರೇ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.
Renowned Kannada novelist Dr. S.L. Bhyrappa was cremated with full state honours on Friday afternoon at Rudrabhoomi, Chamundi Hill foothills, Mysuru. The final rites were performed at 12:30 PM in the presence of family members, dignitaries, and a large gathering of admirers.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm