ಬ್ರೇಕಿಂಗ್ ನ್ಯೂಸ್
30-09-25 01:08 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷರಾಗಿ ನಿಕೇತರಾಜ್ ಮೌರ್ಯ ಅವರನ್ನು ಎರಡೇ ದಿನದಲ್ಲಿ ಬದಲಿಸಲಾಗಿದೆ. ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ವಿ.ಎಸ್. ಆರಾಧ್ಯ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯ ಅವರಿಗೆ ಇದೀಗ ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಆಮೂಲಕ ಅವರಿಗೆ ಒಮ್ಮೆ ಸ್ಥಾನ ಕೊಟ್ಟು ಮತ್ತೆ ಡಿಮೋಷನ್ ಮಾಡಿದಂತಾಗಿದೆ.
ಸೆ.25ರಂದು ಬಿಎಂಟಿಸಿ ಅಧ್ಯಕ್ಷರನ್ನಾಗಿ ನಿಕೇತ್ರಾಜ್ ಮೌರ್ಯ ಅವರನ್ನು ನೇಮಕ ಮಾಡಲಾಗಿತ್ತು. ಬಳಿಕ ನಿಕೇತ್ರಾಜ್ ಮೌರ್ಯ ಅಧಿಕಾರವನ್ನೂ ಸ್ವೀಕಾರ ಮಾಡಿದ್ದರು. ಆದರೆ, ಸೆ.29ರಂದು ಅವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ಮರು ನೇಮಿಸಿ ಆದೇಶದಲ್ಲಿ ತಿಳಿಸಲಾಗಿದೆ. ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದ ವಿ.ಎಸ್.ಆರಾಧ್ಯ ಅವರನ್ನು ಅಧ್ಯಕ್ಷರನ್ನಾಗಿ ಮರು ನೇಮಿಸಲಾಗಿದೆ. ನಿಕೇತ್ ರಾಜ್ ಮೌರ್ಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪರವಾಗಿ ಮಾಧ್ಯಮ ಡಿಬೇಟ್ ನಲ್ಲಿ ಪ್ರಮುಖವಾಗಿ ಗುರುತಿಸಿದ್ದರು. ಪ್ರಚಾರ ಸಂದರ್ಭದಲ್ಲಿಯೂ ಪ್ರಬಲ ಭಾಷಣಕಾರರಾಗಿ ಕೆಲಸ ನಿಭಾಯಿಸಿದ್ದರು.
ಇದಲ್ಲದೆ, ಇತರ 5 ನಿಗಮ ಮಂಡಳಿಗಳಿಗೂ ಹೊಸತಾಗಿ ಅಧ್ಯಕ್ಷರನ್ನು ನೇಮಿಸಲಾಗಿದೆ. ತೀವ್ರ ಲಾಬಿ, ಕೆಲವರ ವಿರೋಧ ಕೇಳಿಬಂದಿದ್ದರಿಂದ ಸಿಎಂ ಸಿದ್ದರಾಮಯ್ಯ ಈ ಬದಲಾವಣೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಸೈಯದ್ ಮೆಹಮೂದ್ ಚಿಸ್ತಿ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ಶರಣಪ್ಪ ಸಲಾದ್ ಪುರ್, ರಾಜ್ಯ ಬೀಜ ನಿಗಮ ನಿಯಮಿತ ಅಧ್ಯಕ್ಷರನ್ನಾಗಿ ಆಂಜನಪ್ಪ, ರಾಜ್ಯ ಸಾಂಬಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೀಲಕಂಠರಾವ್ ಎಸ್. ಮೂಲಗೆ ಹಾಗೂ ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷರನ್ನಾಗಿ ಅನಿಲ್ ಕುಮಾರ್ ಜಮಾದಾರ್ ಅವರನ್ನು ನೇಮಿಸಿ ಹೊಸ ಆದೇಶ ಮಾಡಲಾಗಿದೆ.
Nikethraj Maurya, who had recently assumed charge as BMTC Chairman, has been replaced within two days and reassigned as Vice-Chairman. V.S. Aradhya has been appointed as the new Chairman. The government has also announced fresh appointments to five other state corporations.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm