ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am