ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
30-09-25 04:00 pm
HK News Desk
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
ನಮ್ಮ ಸರ್ಕಾರ ಬಂದ್ರೆ ಕಮಿಷನ್ ತೆಗೆದುಕೊಳ್ಳಲ್ಲ ಎಂದ...
29-09-25 02:49 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
29-09-25 11:02 pm
Mangalore Correspondent
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
ಯುವಜನರಲ್ಲಿ ಹೃದಯದ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್...
27-09-25 07:35 pm
Puttur Baby News, DNA: ಸಹಪಾಠಿಗೆ ಮಗು ಕರುಣಿಸಿದ...
27-09-25 01:33 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm