ಬ್ರೇಕಿಂಗ್ ನ್ಯೂಸ್
01-10-25 10:06 pm HK News Desk ಕರ್ನಾಟಕ
ಹಾಸನ, ಅ.1 : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಸುದರ್ಶನ್ (32) ಮತ್ತು ಕಾವ್ಯಾ (28) ಮೃತ ದಂಪತಿ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ತಡರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಅವರ ಮನೆಯಲ್ಲಿ ಸೋಮವಾರ ರಾತ್ರಿ ನಿಗೂಢ ಸ್ಫೋಟ ಸಂಭವಿಸಿತ್ತು.
ಆರಂಭದಲ್ಲಿ ಇದು ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಸ್ಥಳದಲ್ಲಿ ಎಫ್ಎಸ್ಎಲ್ ಪರಿಶೀಲನೆ ನಡೆಸಲಾಗಿದ್ದು ಯಾವ ಸ್ಫೋಟಕದಿಂದ ಘಟನೆ ಸಂಭವಿಸಿದೆ ಎಂಬ ನಿಖರ ಮಾಹಿತಿ ತಿಳಿಯಲಿದೆ. ಇದೇ ವೇಳೆ, ಸಿಡಿಮದ್ದಿಗೆ ಬಳಸುವ ಸ್ಫೋಟಕ ಸಾಮಗ್ರಿ ಸಿಡಿದಿರುವ ಶಂಕೆ ವ್ಯಕ್ತವಾಗಿದೆ. ಸುದರ್ಶನ್ ಅವರ ಪತ್ನಿ ಕಾವ್ಯಾ ಕುಟುಂಬಕ್ಕೆ ಸಿಡಿಮದ್ದು ತಯಾರಿ ಉದ್ಯಮದ ವ್ಯವಹಾರ ಇರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಕಿಟಕಿ ಒಡೆದು ಛಿದ್ರಗೊಂಡಿದ್ದು ಭಾರೀ ಪ್ರಮಾಣದ ಸ್ಫೋಟ ಉಂಟಾಗಿರುವುದಕ್ಕೆ ಸಾಕ್ಷಿಯಾಗಿದೆ. ಹಾಸನ ಎಸ್ಪಿ ಮೊಹಮ್ಮದ್ ಸಜಿತಾ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯ ಉಸ್ತುವಾರಿ ವಹಿಸಿದ್ದಾರೆ.
ಸೋಮವಾರ ರಾತ್ರಿ 8.30ರ ಸುಮಾರಿಗೆ, ಮಗ, ಸೊಸೆ ಮತ್ತು ಮೊಮ್ಮಕ್ಕಳು ಮನೆಯಲ್ಲಿದ್ದಾಗ, ಶೌಚಾಲಯ ಪ್ರದೇಶದ ಬಳಿ ಸ್ಫೋಟ ಉಂಟಾಗಿತ್ತು ಎಂದು ಮೃತ ಸುದರ್ಶನ್ ತಂದೆ ಮೋಹನ್ ಕುಮಾರ್ ಪೊಲೀಸ್ ದೂರು ನೀಡಿದ್ದರು. ಸ್ಫೋಟದಲ್ಲಿ ಮಗ ಮತ್ತು ಸೊಸೆಗೆ ತೀವ್ರ ಗಾಯಗಳಾಗಿದ್ದವು. ಮನೆಯ ಲಾಬಿಯಲ್ಲಿದ್ದ ಮೋಹನ್ ಕುಮಾರ್ ಮತ್ತು ಮೊಮ್ಮಕ್ಕಳು ಅಪಾಯದಿಂದ ಪಾರಾಗಿದ್ದರು. ಕಾವ್ಯಾ ಮತ್ತು ಸುದರ್ಶನ್ ಮನೆಯ ಪ್ಯಾಸೇಜ್ ಪ್ರದೇಶದಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A late-night explosion in Alur taluk, Hassan district, has left a young couple—Sudarshan (32) and Kavya (28)—dead after succumbing to severe burn injuries at Bengaluru’s Victoria Hospital. Initially suspected to be a cylinder blast, police now believe firecracker-related explosives may have triggered the powerful explosion.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm