ಬ್ರೇಕಿಂಗ್ ನ್ಯೂಸ್
01-10-25 10:06 pm HK News Desk ಕರ್ನಾಟಕ
ಹಾಸನ, ಅ.1 : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮನೆಯೊಂದರಲ್ಲಿ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಸುದರ್ಶನ್ (32) ಮತ್ತು ಕಾವ್ಯಾ (28) ಮೃತ ದಂಪತಿ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮಂಗಳವಾರ ತಡರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಅವರ ಮನೆಯಲ್ಲಿ ಸೋಮವಾರ ರಾತ್ರಿ ನಿಗೂಢ ಸ್ಫೋಟ ಸಂಭವಿಸಿತ್ತು.
ಆರಂಭದಲ್ಲಿ ಇದು ಸಿಲಿಂಡರ್ ಸ್ಫೋಟವಾಗಿರಬಹುದು ಎಂದು ಶಂಕಿಸಲಾಗಿತ್ತು. ಸ್ಥಳದಲ್ಲಿ ಎಫ್ಎಸ್ಎಲ್ ಪರಿಶೀಲನೆ ನಡೆಸಲಾಗಿದ್ದು ಯಾವ ಸ್ಫೋಟಕದಿಂದ ಘಟನೆ ಸಂಭವಿಸಿದೆ ಎಂಬ ನಿಖರ ಮಾಹಿತಿ ತಿಳಿಯಲಿದೆ. ಇದೇ ವೇಳೆ, ಸಿಡಿಮದ್ದಿಗೆ ಬಳಸುವ ಸ್ಫೋಟಕ ಸಾಮಗ್ರಿ ಸಿಡಿದಿರುವ ಶಂಕೆ ವ್ಯಕ್ತವಾಗಿದೆ. ಸುದರ್ಶನ್ ಅವರ ಪತ್ನಿ ಕಾವ್ಯಾ ಕುಟುಂಬಕ್ಕೆ ಸಿಡಿಮದ್ದು ತಯಾರಿ ಉದ್ಯಮದ ವ್ಯವಹಾರ ಇರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಕಿಟಕಿ ಒಡೆದು ಛಿದ್ರಗೊಂಡಿದ್ದು ಭಾರೀ ಪ್ರಮಾಣದ ಸ್ಫೋಟ ಉಂಟಾಗಿರುವುದಕ್ಕೆ ಸಾಕ್ಷಿಯಾಗಿದೆ. ಹಾಸನ ಎಸ್ಪಿ ಮೊಹಮ್ಮದ್ ಸಜಿತಾ ಸ್ಥಳಕ್ಕೆ ಭೇಟಿ ನೀಡಿ, ತನಿಖೆಯ ಉಸ್ತುವಾರಿ ವಹಿಸಿದ್ದಾರೆ.
ಸೋಮವಾರ ರಾತ್ರಿ 8.30ರ ಸುಮಾರಿಗೆ, ಮಗ, ಸೊಸೆ ಮತ್ತು ಮೊಮ್ಮಕ್ಕಳು ಮನೆಯಲ್ಲಿದ್ದಾಗ, ಶೌಚಾಲಯ ಪ್ರದೇಶದ ಬಳಿ ಸ್ಫೋಟ ಉಂಟಾಗಿತ್ತು ಎಂದು ಮೃತ ಸುದರ್ಶನ್ ತಂದೆ ಮೋಹನ್ ಕುಮಾರ್ ಪೊಲೀಸ್ ದೂರು ನೀಡಿದ್ದರು. ಸ್ಫೋಟದಲ್ಲಿ ಮಗ ಮತ್ತು ಸೊಸೆಗೆ ತೀವ್ರ ಗಾಯಗಳಾಗಿದ್ದವು. ಮನೆಯ ಲಾಬಿಯಲ್ಲಿದ್ದ ಮೋಹನ್ ಕುಮಾರ್ ಮತ್ತು ಮೊಮ್ಮಕ್ಕಳು ಅಪಾಯದಿಂದ ಪಾರಾಗಿದ್ದರು. ಕಾವ್ಯಾ ಮತ್ತು ಸುದರ್ಶನ್ ಮನೆಯ ಪ್ಯಾಸೇಜ್ ಪ್ರದೇಶದಲ್ಲಿ ಏನೋ ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಈ ಕುರಿತು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A late-night explosion in Alur taluk, Hassan district, has left a young couple—Sudarshan (32) and Kavya (28)—dead after succumbing to severe burn injuries at Bengaluru’s Victoria Hospital. Initially suspected to be a cylinder blast, police now believe firecracker-related explosives may have triggered the powerful explosion.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm