ಬ್ರೇಕಿಂಗ್ ನ್ಯೂಸ್
04-10-25 09:18 pm HK News Desk ಕರ್ನಾಟಕ
ಬೆಳಗಾವಿ/ಸಿಂಧುದುರ್ಗ, ಅ 04 : ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೆಂಗುರ್ಲಾ ತಾಲೂಕಿನ ಶಿರೋಡಾದ ವೇಳಾಗರ ಬೀಚಿನಲ್ಲಿ ಸಮುದ್ರದ ತೆರೆಗಳ ಅಬ್ಬರಕ್ಕೆ ಸಿಲುಕಿ ಬೆಳಗಾವಿ ಜಿಲ್ಲೆಯ ನಾಲ್ವರು ಸೇರಿ ಏಳು ಮಂದಿ ಜಲಸಮಾಧಿಯಾಗಿದ್ದಾರೆ.
ಮೃತಪಟ್ಟವರಲ್ಲಿ ನಾಲ್ವರು ಖಾನಾಪುರ ತಾಲೂಕಿನ ಲೋಂಡಾ ಗ್ರಾಮದವರು, ಒಬ್ಬರು ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದವರು. ಮತ್ತಿಬ್ಬರು ಮಹಾರಾಷ್ಟ್ರದವರು ಎಂದು ತಿಳಿದು ಬಂದಿದೆ. ಇವರ ಜೊತೆಗೆ ನಾಪತ್ತೆಯಾಗಿದ್ದ ನಾಲ್ವರು ಸುರಕ್ಷಿತವಾಗಿ ಮರಳಿರುವ ಮಾಹಿತಿ ಲಭ್ಯವಾಗಿದೆ.
ಮೃತಪಟ್ಟವರ ವಿವರ ಹೀಗಿದೆ :
ಲೋಂಡಾದ ಇರ್ಫಾನ್ ಇಸಾಕ್ ಕಿತ್ತೂರ (35), ಇರ್ಫಾನ್ ಪತ್ನಿ ಫರಿನಾ ಕಿತ್ತೂರ (31), ಇವರ ಪುತ್ರ ಇಬಾದ್ ಇರ್ಫಾನ್ ಕಿತ್ತೂರ (12) ಹಾಗೂ ಇರ್ಫಾನ್ ಅವರ ತಮ್ಮನ ಮಗ ಇಕ್ವಾನ್ ಇಮ್ರಾನ್ ಕಿತ್ತೂರ್ (15), ಅಳ್ನಾವರ ಮೂಲದ ನಮೀರಾ ಅಕ್ತರ್ (16), ಮಹಾರಾಷ್ಟ್ರದ ಪರಯಾನ್ ಮನಿಯರ್ (20) ಹಾಗೂ ಜಾಕೀರ್ ಮನಿಯರ್ (13) ಮೃತಪಟ್ಟವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ದಡದ ಬಳಿ ನಾಲ್ವರು ಪತ್ತೆ :
ಸಮುದ್ರದಲ್ಲಿ ಕಾಣೆಯಾಗಿದ್ದ ಇಮ್ರಾನ್ ಇಸಾಕ್ ಕಿತ್ತೂರ (37), ಜಬಿನ್ ಇಮ್ರಾನ್ ಕಿತ್ತೂರ (32), ಇಜಾನ್ ಇಮ್ರಾನ್ ಕಿತ್ತೂರ (10) ಹಾಗೂ ಇಸ್ರಾ ಇಮ್ರಾನ್ ಕಿತ್ತೂರ (17) ಅವರು ಶನಿವಾರ ನಸುಕಿನ ಜಾವ ಸಮುದ್ರ ದಂಡೆಯ ಮೇಲೆ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರಿಗೆ ಸಿಂಧದುರ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲೋಂಡಾ ಗ್ರಾಮದ ಒಂದೇ ಕುಟುಂಬದ 8 ಜನ ಸಂಬಂಧಿಗಳು ಶುಕ್ರವಾರ ದಸರಾ ರಜೆ ಹಿನ್ನೆಲೆಯಲ್ಲಿ ಶಿರೋಡಾದ ವೇಳಾಗರ ಬೀಚಿಗೆ ತೆರಳಿದ್ದರು. ಸಂಜೆ 4ರ ಸುಮಾರಿಗೆ ಎಲ್ಲರೂ ಸಮುದ್ರದ ನೀರಿನೊಳಗೆ ಆಟವಾಡುತ್ತ ಹೋದರು. ಇದ್ದಕ್ಕಿದ್ದಂತೆ ದೊಡ್ಡ ತೆರೆಗಳು ಅಪ್ಪಳಿಸಿ ಇವರನ್ನು ಒಳಕ್ಕೆ ಎಳೆದುಕೊಂಡು ಹೋಗಿದ್ದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಾರಾಷ್ಟ್ರದ ಸಾವಂತವಾಡಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಲೋಂಡಾಗೆ ಸಾಗಿಸಲಾಗುತ್ತದೆ ಎಂದು ಖಾನಾಪುರ ಪೊಲೀಸರು ತಿಳಿಸಿದ್ದಾರೆ.
A holiday turned into a nightmare when massive waves at Velagar beach in Sindhudurg district, Maharashtra, claimed the lives of seven people, including five from Karnataka. Among the deceased were four members of a family from Londa village, Belagavi, and one from Alnavar, along with two from Maharashtra.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm