ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm