ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
30-12-25 06:34 pm
Bangalore Correspondent
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
ಚಿಕನ್ ನೆಕ್ ತಪ್ಪನ್ನು ಬಾಂಗ್ಲಾ ವಿಭಜನೆ ವೇಳೆ ಸರಿಪಡ...
30-12-25 03:08 pm
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣ ; ಮೂರು ಪೊಲೀಸ್...
29-12-25 11:13 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm