ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm