ಬ್ರೇಕಿಂಗ್ ನ್ಯೂಸ್
05-10-25 07:18 pm HK News Desk ಕರ್ನಾಟಕ
ಹಾಸನ, ಅ.5 : ಹಾಸನ ಜಿಲ್ಲೆಯಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಅವರ ಪತಿಯ ಮೇಲೆ ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿರುವ ಘಟನೆ ನಡೆದಿದೆ. ಶಿಕ್ಷಕಿಗೆ ಮುಖ, ಕೈ-ಕಾಲು, ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ.
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಘಟನೆ ನಡೆದಿದೆ. ಶಿಕ್ಷಕಿಯನ್ನು ಬಚಾವ್ ಮಾಡಲು ಬಂದ ಇತರ ಏಳು ಮಂದಿ ಮೇಲೂ ನಾಯಿಗಳ ದಾಳಿ ಮಾಡಿವೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿ ಶಿಕ್ಷಕಿ ಚಿಕ್ಕಮ್ಮ ತೀವ್ರ ಗಾಯಗೊಂಡಿದ್ದು ಇವರು ಪಟ್ಟಣದ ಜಿಎಚ್ಪಿಎಸ್ ಶಾಲೆಯ ಶಿಕ್ಷಕಿಯಾಗಿದ್ದಾರೆ.



ಚಿಕ್ಕಮ್ಮ ಅವರು ತನಗೆ ನೀಡಿದ್ದ ಸಮೀಕ್ಷೆ ಮುಗಿಸಲು ಇಂದು ಕಡೆಯ ದಿನವಾಗಿದ್ದರಿಂದ ಪತಿ ಶಿವಕುಮಾರ್ ಜೊತೆಗೆ ತೆರಳಿದ್ದರು. ಅವರಿಗೆ ನೀಡಲಾಗಿದ್ದ ಸಮೀಕ್ಷೆಯಲ್ಲಿ ಮೂರು ಮನೆ ಮಾತ್ರ ಬಾಕಿಯಿತ್ತು. ಭಾನುವಾರ ಮಧ್ಯಾಹ್ನ ನೆಹರು ನಗರದ ಜೈಭೀಮ್ ಏರಿಯಾಕ್ಕೆ ತೆರಳಿದ್ದಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಈ ವೇಳೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದು ಪತ್ನಿಯನ್ನು ಬಿಡಿಸಿಕೊಳ್ಳಲು ಬಂದ ಪತಿ ಶಿವಕುಮಾರ್ಗೂ ಕಚ್ಚಿದೆ. ಇದನ್ನು ಕಂಡು ಸ್ಥಳೀಯರು ಪತಿ- ಪತ್ನಿಯನ್ನು ಬಚಾವ್ ಮಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ, ಬೀದಿ ನಾಯಿಗಳು ಧರ್ಮ, ಪೃಥ್ವಿ, ಸಚಿನ್ ಸೇರಿ ಏಳು ಮಂದಿಗೆ ಕಚ್ಚಿ ಗಾಯಗೊಳಿಸಿದೆ. ಇದೇ ವೇಳೆ, ಅಲ್ಲಿಯೇ ಆಟವಾಡುತ್ತಿದ್ದ ಐದು ವರ್ಷದ ಬಾಲಕ ಕಿಶನ್ ಮೇಲೂ ನಾಯಿಗಳು ದಾಳಿ ಮಾಡಿ ಕಚ್ಚಿದೆ. ತೀವ್ರ ಗಾಯಗೊಂಡಿರುವ ಶಿಕ್ಷಕಿ ಚಿಕ್ಕಮ್ಮ ಹಾಗೂ ಉಳಿದ ಗಾಯಾಳುಗಳಿಗೆ ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a shocking incident in Belur town, Hassan district, a government school teacher and her husband were brutally attacked by a pack of stray dogs while conducting a caste census survey. The teacher, Chikkamma, sustained serious injuries to her face, hands, legs, and body. Her husband Shivakumar, who tried to rescue her, was also bitten.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm