ಬ್ರೇಕಿಂಗ್ ನ್ಯೂಸ್
05-10-25 07:38 pm HK News Desk ಕರ್ನಾಟಕ
ಮೈಸೂರು, ಅ.5 : ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯನವರು ಬಹಳ ಆತುರದಲ್ಲಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಖರ್ಗೆ, ಡಿಕೆಶಿಗಿಂತ ಮುಂದೆ ಸಾಗಿ ರ್ಯಾಂಪ್ ವಾಕ್ ಮಾಡಿ ಶಕ್ತಿ ಪ್ರದರ್ಶನ ಮಾಡಿದ್ರು. ಕಾಂಗ್ರೆಸಿನ ಹಿರಿಯ ಸಚಿವರುಗಳೇ ಆಕ್ಟೋಬರ್ ನವೆಂಬರ್ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ. ಕೆ.ಸಿ ವೇಣಿಗೋಪಾಲ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ, ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ. ನಾಯಕತ್ವ ಬದಲಾವಣೆ ಆಗೊಲ್ಲ ಎಂದು ಎಲ್ಲಿಯೂ ಹೇಳಿಲ್ಲ.
ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ಬಹುತೇಕ ರಾಜಕೀಯ ಬದಲಾವಣೆ ಆಗಲಿದೆ. ರಾಜ್ಯಲ್ಲಿ ರಾಜಕೀಯ ಅಲ್ಲೋಲ ಕಲ್ಲೋಲ ಆಗೋದು ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಗೊಂದಲ ವಿಚಾರದ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಡಿಕೆಶಿಯವರ ಪ್ರತಿಕ್ರಿಯೆ ನೋಡಿದಾಗಲೇ ಗೊತ್ತಾಗುತ್ತದೆ. ಸುಮಾರು 60 ಪ್ರಶ್ನೆಗಳನ್ನ ಜನರ ಮುಂದೆ ಇಟ್ಟಿದ್ದಾರೆ. ಇಷ್ಟೊಂದು ಪ್ರಶ್ನೆ ಯಾಕೆಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ದಿನೇ ದಿನೇ ಇದರಿಂದ ಗೊಂದಲ ಸೃಷ್ಟಿಯಾಗುತ್ತಿದೆ. ಬೆಂಗಳೂರಿನಲ್ಲೂ ಸಾಕಷ್ಟು ಗೊಂದಲ ಉಂಟಾಗಿವೆ. ಯಾವುದೇ ಪೂರ್ವ ತಯಾರಿ ಇಲ್ಲದೆ ಆತುರಾತುರವಾಗಿ ಸರ್ಕಾರ ನಿರ್ಣಯ ಕೈಗೊಂಡಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಏಕೆ.? ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ ಗಣತಿಗೂ ಸಂಬಂಧ ಇದೆಯಾ ಎಂದು ಚರ್ಚೆ ಯಾಗುತ್ತಿದೆ.
ಈಗಾಗಲೇ ಪ್ರಧಾನ ಮಂತ್ರಿಗಳು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಇಡೀ ದೇಶದಲ್ಲಿ ಜಾತಿ ಜನಗಣತಿಗೆ ಆದೇಶಿಸಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಠಿ ಮಾಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.
BJP state president B.Y. Vijayendra has claimed that Karnataka will witness major political changes following the Bihar elections. Criticizing Chief Minister Siddaramaiah for being in haste, he recalled Congress’s internal power tussles and remarks by senior leaders on possible leadership change.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm