ಬ್ರೇಕಿಂಗ್ ನ್ಯೂಸ್
05-10-25 07:57 pm HK News Desk ಕರ್ನಾಟಕ
ಬಾಗಲಕೋಟ, ಅ.5 : ಸಿಎಂ ಅವ್ರ ಬಗ್ಗೆ ಗೌರವ ಇದೆ, ಆದರೆ ಸಮಾಜ ವಿಘಟನೆ ಮಾಡುವವರಿಗೆ ಸಪೋರ್ಟ್ ಮಾಡುವುದನ್ನು ಬಯಸಲ್ಲ. ಆ ತಂಡದಿಂದ ಹಿಂದೆಯೂ ಅಂತರಹ ಕಾಯ್ದುಕೊಳ್ಳಿ ಅಂತ ಹೇಳಿದ್ದೆವು. ಈಗಲೂ ಅಂತರ ಕಾಯ್ದುಕೊಳ್ಳಿ ಅಂತ ಹೇಳ್ತೀವಿ. ಆ ಗುಂಪಿನಲ್ಲಿ ರಾಜ್ಯದ ಸಿಎಂ ಪಾಲ್ಗೊಳ್ಳೋದು ಸೂಕ್ತವಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಕೇಡು ಬಂದೀತು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಹಿಂದೆ ಬಹುದೊಡ್ಡ ನಾಯಕರು, ದೊಡ್ಡ ಸ್ವಾಮೀಜಿಗಳು ಪ್ರತ್ಯೇಕ ಧರ್ಮ ಮಾಡಲಿಕ್ಕೆ ಹೋಗಿ ಕೈಸುಟ್ಟುಕೊಂಡಿದ್ದಾರೆ. ಇವತ್ತು ಮತ್ತೆ ವ್ಯರ್ಥ ಪ್ರಯತ್ನ ಮಾಡ್ತಿದ್ದಾರೆ. ಬಹುಶಃ ಪ್ರತಿ ಜಿಲ್ಲೆಯಲ್ಲಿ ಜನತೆಗೆ ವಿನಂತಿ ಮಾಡ್ಕೊಂಡಿದ್ದಾರೆ. ಸಿಎಂಗೆ ಸನ್ಮಾನ ಮಾಡ್ತೇವೆ ಅಂತ ಹೇಳಿ ಬರ ಹೇಳಿದ್ದಾರೆ. ಬಹಳಷ್ಟು ಮಠಾದಿಪತಿಗಳಿಗೆ ಫೋನ್ ಕರೆ ಮಾಡಿ ಬಹು ಸಂಖ್ಯೆಯಲ್ಲಿ ಬರಬೇಕು ಅಂತ ತಿಳಿಸಿದ್ದಾರೆ.
ಪ್ರತ್ಯೇಕ ಲಿಂಗಾಯತರು ಅನ್ನುವ ಹೆಸರನ್ನ ಮಾಡ್ತಿರೋದು ಅಖಂಡ ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡ್ತಿರೋ ದ್ರೋಹವಾಗಿದೆ. ಸಮಾಜದ ವಿಘಟನೆ ಕೆಲಸ ಇದಾಗಿದೆ ಅಂತ ಸಿಎಂ ಗಮನಕ್ಕೆ ತರಲು ಬಯಸುತ್ತೇವೆ. ಇಡೀ ರಾಜ್ಯದ ಮಠಾಧೀಶರ ಒಲವು ಏನಿದೆ ಅನ್ನೋದನ್ನ ಹುಬ್ಬಳ್ಳಿಯ ಸಮಾವೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಆಂಧ್ರ, ಮಹಾರಾಷ್ಟ್ರ, ತೆಲಂಗಾಣ, ಕೇರಳ ಇತ್ಯಾದಿ ಎಲ್ಲ ರಾಜ್ಯಗಳ ಜನ ವೀರಶೈವ ಲಿಂಗಾಯತ ಒಂದೇ ಅನ್ನೋದ್ರ ಕಡೆ ಇದ್ದಾರೆ ಹೊರತು, ಭಿನ್ನ ಧ್ವನಿ ಎತ್ತಿಲ್ಲ. ಕೆಲವೇ ಬೆರಳೆಣಿಕೆಯ ಸಮಾಜಕ್ಕೆ ಬೇಡವಾದ ಮಠಾಧಿಪತಿಗಳ ಈ ಬೇಡಿಕೆ ಹೊಂದಿದ್ದಾರೆ. ಜನರ ಭಿನ್ನ ಧ್ವನಿಯನ್ನು ಮುಖ್ಯಮಂತ್ರಿಗಳು ಮನ್ನಿಸಿದರೆ ತಮ್ಮ ವ್ಯಕ್ತಿತ್ವ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾಗುತ್ತೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಸವ ಸಂಸ್ಕೃತಿ ಅಭಿಯಾನ ಹೆಸರಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಖ್ಯಮಂತ್ರಿ ಪಾಲ್ಗೊಳ್ಳಬಾರದು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
Lingayat seer Fakir Dingaleshwara Swamiji has cautioned Chief Minister Siddaramaiah against supporting efforts to create a separate Lingayat identity, calling it divisive and harmful to both society and the Congress party.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm