ಬ್ರೇಕಿಂಗ್ ನ್ಯೂಸ್
06-10-25 05:27 pm HK News Desk ಕರ್ನಾಟಕ
ಹಾಸನ, ಅ.6 : ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಗುಣಮಟ್ಟದ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿ ಕಾಫ್ ಸಿರಫ್ಗಳ ಟೆಸ್ಟ್ಗೆ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ರಾಜ್ಯ ಆರೋಗ್ಯ ಇಲಾಖೆಯಿಂದ ಕಾಫ್ ಸಿರಫ್ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕಾಫ್ ಸಿರಫ್ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕರ್ನಾಟಕದಲ್ಲಿ ಸಿರಪ್ ಪೂರೈಕೆ ಆಗಿಲ್ಲ
ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕಾಫ್ ಸಿರಫ್ ಅನ್ನು ಕರ್ನಾಟಕದಲ್ಲಿ ಸರಬರಾಜು ಮಾಡಲಾಗಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೇರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಪ್ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಸಾಮಾನ್ಯ ಶೀತಕ್ಕೆಲ್ಲ ಕಾಫ್ ಸಿರಪ್ ನೀಡಬೇಕಾಗಿಲ್ಲ. ಈ ಬಗ್ಗೆ ಪೋಷಕರು ಕೂಡ ಜಾಗೃತಿ ಹೊಂದಬೇಕೆಂದು ಸಲಹೆ ನೀಡಿದರು.
ಕಲಬೆರಕೆ ಪತ್ತೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೆವು
ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ ʼವೆಬ್ಸೈಟ್ʼ ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ- ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಇದೇ ವೇಳೆ ಹೇಳಿದರು.
In the wake of child deaths in other states due to substandard cough syrups, Karnataka Health Minister Dinesh Gundu Rao has assured that no such syrups have been supplied in the state. Speaking in Hassan, he said precautionary measures have been taken with all syrup samples from different companies collected for testing.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 12:31 pm
HK News Desk
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm