ಬ್ರೇಕಿಂಗ್ ನ್ಯೂಸ್
06-10-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.6 : ರಾಜ್ಯದಲ್ಲಿ ಜಾತಿ ಗಣತಿ ಅವಧಿ ವಿಸ್ತರಣೆಯಾಗಿದ್ದು ರಾಜ್ಯಾದ್ಯಂತ ಶಾಲೆಗಳ ಸಮಯವನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ ಬೆಳಗ್ಗೆ 8ರಿಂದ ತೊಡಗಿ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ತರಗತಿ ನಡೆಸಲು ಸೂಚಿಸಿದೆ.
ರಾಜ್ಯಾದ್ಯಂತ ಜಾತಿ ಗಣತಿ ಸೆಪ್ಟೆಂಬರ್ 22 ರಿಂದ ನಡೆಯುತ್ತಿದ್ದು, ಶಾಲಾ ಶಿಕ್ಷಕರು, ಉಪನ್ಯಾಸಕರು ಸಮೀಕ್ಷೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಣತಿಯನ್ನು ಅಕ್ಟೋಬರ್ 7 ರ ಒಳಗೆ ಮುಗಿಸಲು ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದಿದ್ದರಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮಧ್ಯಾಹ್ನ ವರೆಗೆ ಶಾಲಾ ತರಗತಿ ನಡೆಸಿ ಆಬಳಿಕ ಸಮೀಕ್ಷೆ ಕಾರ್ಯಕ್ಕೆ ತೆರಳಲಿದ್ದಾರೆ. ಶಾಲಾ ಸಮಯ ಬದಲಾವಣೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.
ರಾಜ್ಯದಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 12 ರ ವರೆಗೆ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಸಲು ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಸೂಚನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 24 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿ ನಡೆಯಲಿವೆ. ಆ ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಬೇಕಿದೆ. ಸಮೀಕ್ಷೆಯನ್ನು ಅಕ್ಟೋಬರ್ 12 ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಗ್ರೇಟರ್ ಬೆಂಗಳೂರಿನಲ್ಲಿ ಅಕ್ಟೋಬರ್ 24 ರೊಳಗೆ ಪೂರ್ಣಗೊಳಿಸಬೇಕು ಎಂದು ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಗಡುವು ನೀಡಿದೆ.
With the ongoing caste census extended beyond the earlier deadline, the Karnataka Department of School Education has issued an order revising school timings across the state. Government and aided schools will now function only from 8 a.m. to 1 p.m. starting October 8.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm