ಬ್ರೇಕಿಂಗ್ ನ್ಯೂಸ್
06-10-25 10:47 pm Bangalore Correspondent ಕರ್ನಾಟಕ
ಬೆಂಗಳೂರು, ಅ.6 : ರಾಜ್ಯದಲ್ಲಿ ಜಾತಿ ಗಣತಿ ಅವಧಿ ವಿಸ್ತರಣೆಯಾಗಿದ್ದು ರಾಜ್ಯಾದ್ಯಂತ ಶಾಲೆಗಳ ಸಮಯವನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ ಬೆಳಗ್ಗೆ 8ರಿಂದ ತೊಡಗಿ ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ತರಗತಿ ನಡೆಸಲು ಸೂಚಿಸಿದೆ.
ರಾಜ್ಯಾದ್ಯಂತ ಜಾತಿ ಗಣತಿ ಸೆಪ್ಟೆಂಬರ್ 22 ರಿಂದ ನಡೆಯುತ್ತಿದ್ದು, ಶಾಲಾ ಶಿಕ್ಷಕರು, ಉಪನ್ಯಾಸಕರು ಸಮೀಕ್ಷೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಗಣತಿಯನ್ನು ಅಕ್ಟೋಬರ್ 7 ರ ಒಳಗೆ ಮುಗಿಸಲು ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದಿದ್ದರಿಂದ ದಿನಾಂಕ ವಿಸ್ತರಣೆ ಮಾಡಲಾಗಿದೆ. ಹೀಗಾಗಿ, ಅಕ್ಟೋಬರ್ 8 ರಿಂದ ಶಾಲಾ ಸಮಯವನ್ನು ಪರಿಷ್ಕರಣೆ ಮಾಡಲಾಗಿದೆ. ಮಧ್ಯಾಹ್ನ ವರೆಗೆ ಶಾಲಾ ತರಗತಿ ನಡೆಸಿ ಆಬಳಿಕ ಸಮೀಕ್ಷೆ ಕಾರ್ಯಕ್ಕೆ ತೆರಳಲಿದ್ದಾರೆ. ಶಾಲಾ ಸಮಯ ಬದಲಾವಣೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ಅನ್ವಯವಾಗಲಿದೆ.
ರಾಜ್ಯದಲ್ಲಿ (ಗ್ರೇಟರ್ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 12 ರ ವರೆಗೆ ತರಗತಿಗಳನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಡೆಸಲು ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಸೂಚನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್ 8 ರಿಂದ 24 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿ ನಡೆಯಲಿವೆ. ಆ ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸಬೇಕಿದೆ. ಸಮೀಕ್ಷೆಯನ್ನು ಅಕ್ಟೋಬರ್ 12 ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಗ್ರೇಟರ್ ಬೆಂಗಳೂರಿನಲ್ಲಿ ಅಕ್ಟೋಬರ್ 24 ರೊಳಗೆ ಪೂರ್ಣಗೊಳಿಸಬೇಕು ಎಂದು ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಗಡುವು ನೀಡಿದೆ.
With the ongoing caste census extended beyond the earlier deadline, the Karnataka Department of School Education has issued an order revising school timings across the state. Government and aided schools will now function only from 8 a.m. to 1 p.m. starting October 8.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am