ಬ್ರೇಕಿಂಗ್ ನ್ಯೂಸ್
07-10-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.07: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಸ್ಟೂಡಿಯೋಗೆ ರಾಮನಗರ ಜಿಲ್ಲಾಡಳಿತದಿಂದ ದಾಳಿ ನಡೆಸಿ ಶೋ ಸ್ಥಗಿತಗೊಳಿದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದು ನಟ್ಟು ಬೋಲ್ಟ್ನ ಪ್ರತಿಫಲ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ.
ಬಿಗ್ ಬಾಸ್ ಮನೆ ಬಂದ್ ಮಾಡಿಸಿದ ಹಿನ್ನೆಲೆ ಮಂಗಳವಾರ ಸಂಜೆ ಫೇಸ್ಬುಕ್ ಲೈವ್ ಬಂದ ಪ್ರಶಾಂತ್ ಸಂಬರಗಿಯವರು ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದು ನಟ ಸುದೀಪ್ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡು ಸರ್ಕಾರ ಆಡಿದ ಆಟ ಎಂದು ದೂರಿದ್ದಾರೆ.


ಕಳೆದ ವರ್ಷ ಬಿಗ್ ಬಾಸ್ ಸೀಜನ್ ನಡೆಯುವಾಗಲೂ ಹುಲಿ ಉಗರು ಕೇಸ್ ನಡೆಸಿ ದೊಡ್ಡ ರಂಪ ಮಾಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರ ಯಾರನ್ನೋ ಒಬ್ಬರನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದೆ. ಸ್ಟೂಡಿಯೋ ಇರುವ ಜಾಗ ಮಾಲೀಕರು ಜೆಡಿಎಸ್ ಕೇಂದ್ರ ಸಚಿವರೊಬ್ಬರಿಗೆ ಹತ್ತಿರದ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಬರಗಿ ಹೇಳಿದರು.
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರು. ಅವರು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಜತೆಗೆ ಅವರು ಡಿಸಿಎಂ ಈ ಹಿಂದೆ ಹೇಳಿದ್ದ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಬಿಗ್ ಬಾಸ್ ಶೋ ಆರಂಭವಾಗಿದ್ದು, ಅವರನ್ನು ಗುರಿಯಾಗಿಸಿಕೊಂಡು ಈ ರಾಜಕೀಯ ಆಟ ಆಡಿದ್ದಾರೆ. ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಈ ಹಿಂದೆ ರಾಜಕಾರಣಿ ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಸಂಬರಗಿ ಕಿಡಿಕಾರಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮ
ಸರ್ಕಾರವು ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮಕೈಗೊಂಡಿದೆ. ಇದು ಕನ್ನಡ ಮನೋರಂಜನಾ ವಲಯವು ತಲೆ ತಗ್ಗಿಸಬೇಕಾದ ಸಂಗತಿ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೊಟ್ಟ 30 ದಿನಗಳವರೆಗೂ ಅವಕಾಶ ನೀಡಲಾಗುತ್ತದೆ. ಆದರೆ, ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಮೂಲದ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗೆ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ಮಾಡಿದೆ ಎಂದು ಹೇಳಿದ್ದಾರೆ.
The sudden halt of Bigg Boss Kannada Season 12 after the Ramnagara district administration sealed Jalewood Studios has now taken a political turn. Former contestant Prashanth Sambargi has alleged that the action was a politically motivated move targeting actor Sudeep and certain JDS leaders close to the studio owners.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm