ಬ್ರೇಕಿಂಗ್ ನ್ಯೂಸ್
07-10-25 10:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.07: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಡೆಯುತ್ತಿರುವ ಸ್ಟೂಡಿಯೋಗೆ ರಾಮನಗರ ಜಿಲ್ಲಾಡಳಿತದಿಂದ ದಾಳಿ ನಡೆಸಿ ಶೋ ಸ್ಥಗಿತಗೊಳಿದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದು ನಟ್ಟು ಬೋಲ್ಟ್ನ ಪ್ರತಿಫಲ ಎಂದು ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಆರೋಪ ಮಾಡಿದ್ದಾರೆ.
ಬಿಗ್ ಬಾಸ್ ಮನೆ ಬಂದ್ ಮಾಡಿಸಿದ ಹಿನ್ನೆಲೆ ಮಂಗಳವಾರ ಸಂಜೆ ಫೇಸ್ಬುಕ್ ಲೈವ್ ಬಂದ ಪ್ರಶಾಂತ್ ಸಂಬರಗಿಯವರು ಕಾಂಗ್ರೆಸ್ ಸರ್ಕಾರ ಹಾಗೂ ಡಿಸಿಎಂ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದು ನಟ ಸುದೀಪ್ ಹಾಗೂ ಕರ್ನಾಟಕದ ಜೆಡಿಎಸ್ ಪಕ್ಷದ ಕೇಂದ್ರ ಸಚಿವರನ್ನು ಗುರಿಯಾಗಿಸಿಕೊಂಡು ಸರ್ಕಾರ ಆಡಿದ ಆಟ ಎಂದು ದೂರಿದ್ದಾರೆ.


ಕಳೆದ ವರ್ಷ ಬಿಗ್ ಬಾಸ್ ಸೀಜನ್ ನಡೆಯುವಾಗಲೂ ಹುಲಿ ಉಗರು ಕೇಸ್ ನಡೆಸಿ ದೊಡ್ಡ ರಂಪ ಮಾಡಲಾಗಿತ್ತು. ಇದು ಕಾಂಗ್ರೆಸ್ ಸರ್ಕಾರ ಯಾರನ್ನೋ ಒಬ್ಬರನ್ನು ಗುರಿಯಾಗಿಸಿಕೊಂಡು ಈ ರೀತಿ ಮಾಡುತ್ತಿದೆ. ಸ್ಟೂಡಿಯೋ ಇರುವ ಜಾಗ ಮಾಲೀಕರು ಜೆಡಿಎಸ್ ಕೇಂದ್ರ ಸಚಿವರೊಬ್ಬರಿಗೆ ಹತ್ತಿರದ ವ್ಯಕ್ತಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಬರಗಿ ಹೇಳಿದರು.
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರು. ಅವರು ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಜತೆಗೆ ಅವರು ಡಿಸಿಎಂ ಈ ಹಿಂದೆ ಹೇಳಿದ್ದ ನಟ್ಟು ಬೋಲ್ಟ್ ಟೈಟ್ ಮಾಡ್ತೇನೆ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈಗ ಬಿಗ್ ಬಾಸ್ ಶೋ ಆರಂಭವಾಗಿದ್ದು, ಅವರನ್ನು ಗುರಿಯಾಗಿಸಿಕೊಂಡು ಈ ರಾಜಕೀಯ ಆಟ ಆಡಿದ್ದಾರೆ. ನಟ್ಟು ಬೋಲ್ಟು ಟೈಟ್ ಮಾಡುತ್ತೇನೆ ಎಂದು ಈ ಹಿಂದೆ ರಾಜಕಾರಣಿ ಹೇಳಿದಂತೆ ನಡೆದುಕೊಂಡಿದ್ದಾರೆ ಎಂದು ಸಂಬರಗಿ ಕಿಡಿಕಾರಿದ್ದಾರೆ.
ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮ
ಸರ್ಕಾರವು ಕ್ಷುಲ್ಲಕ ಕಾರಣ ನೀಡಿ ಬಿಗ್ ಬಾಸ್ ವಿರುದ್ಧ ಕ್ರಮಕೈಗೊಂಡಿದೆ. ಇದು ಕನ್ನಡ ಮನೋರಂಜನಾ ವಲಯವು ತಲೆ ತಗ್ಗಿಸಬೇಕಾದ ಸಂಗತಿ. ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಕೊಟ್ಟ 30 ದಿನಗಳವರೆಗೂ ಅವಕಾಶ ನೀಡಲಾಗುತ್ತದೆ. ಆದರೆ, ಸರ್ಕಾರವು ದೆಹಲಿಯಲ್ಲಿರುವ ಕರ್ನಾಟಕ ಮೂಲದ ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿಗೆ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ಮಾಡಿದೆ ಎಂದು ಹೇಳಿದ್ದಾರೆ.
The sudden halt of Bigg Boss Kannada Season 12 after the Ramnagara district administration sealed Jalewood Studios has now taken a political turn. Former contestant Prashanth Sambargi has alleged that the action was a politically motivated move targeting actor Sudeep and certain JDS leaders close to the studio owners.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm