ಬ್ರೇಕಿಂಗ್ ನ್ಯೂಸ್
08-10-25 11:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.8 : ಕಾಂತಾರ- 1 ಸಿನಿಮಾವು ವಿಶ್ವಾದ್ಯಂತ ಭರ್ಜರಿ ಕಮಾಯಿ ಮಾಡುತ್ತಿದೆ. ಉತ್ತರ ಭಾರತದಲ್ಲಿ ಕಾಂತಾರ ಹಿಂದಿ ವರ್ಷನ್ಗೂ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಸದ್ಯ ಆರು ದಿನಗಳಿಗೆ ಈ ಸಿನಿಮಾದ ಗಳಿಕೆಯು 425+ ಕೋಟಿ ರೂ. ಆಗಿದೆ.
ಅಕ್ಟೋಬರ್ 2ರಂದು ತೆರೆಗೆ ಬಂದು, ಅ.8ಕ್ಕೆ ಏಳು ದಿನಗಳಾಗಿವೆ. ಒಂದು ವಾರ ತುಂಬುವುದಕ್ಕೆ 1 ದಿನ ಇರುವಾಗಲೇ ಕಾಂತಾರ 425+ ಕೋಟಿ ರೂ. ಗಳಿಕೆ ಆಗಿದೆ. ಅ.8ರ ಗಳಿಕೆಯೂ ಸೇರಿದರೆ. 450+ ಕೋಟಿ ಆಗುವುದು ನಿಶ್ಚಿತ.
2022ರಲ್ಲಿ ತೆರೆಕಂಡಿದ್ದ 'ಕಾಂತಾರ' ಸಿನಿಮಾದ ಒಟ್ಟಾರೆ ಗಳಿಕೆ 450 ಕೋಟಿ ರೂ. ಆಗಿತ್ತು. ಇದೀಗ ಹಳೆ ದಾಖಲೆಯನ್ನು ಏಳು ದಿನಗಳಲ್ಲೇ ಬ್ರೇಕ್ ಮಾಡಿದೆ. ಅಲ್ಲದೆ, ಕನ್ನಡದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ 2ನೇ ಸಿನಿಮಾ ಎಂಬ ಖ್ಯಾತಿಗೂ 'ಕಾಂತಾರ- 1' ಪಾತ್ರವಾಗಲಿದೆ. ಗಳಿಕೆಯ ವಿಚಾರದಲ್ಲಿ 'ಕೆಜಿಎಫ್: ಚಾಪ್ಟರ್ 2' ಮೊದಲ ಸ್ಥಾನದಲ್ಲಿದೆ.
ಕಾಂತಾರ: ಚಾಪ್ಟರ್ 1 ಸಿನಿಮಾದ ಕನ್ನಡ ವರ್ಷನ್ಗೆ ಆರು ದಿನಗಳಲ್ಲಿ ಭಾರತದಲ್ಲಿ ಸಿಕ್ಕಿರುವ ಹಣ ಭರ್ತಿ 90 ಕೋಟಿ ರೂಪಾಯಿ. ಹಿಂದಿ ವರ್ಷನ್ನಿಂದ 94 ಕೋಟಿ ಗಳಿಕೆಯಾದರೆ, ತೆಲುಗು ವರ್ಷನ್ನಿಂದ 58 ಕೋಟಿ ಹಣ ಸಿಕ್ಕಿದೆ. ತಮಿಳು ವರ್ಷನ್ನಿಂದ 28 ಕೋಟಿ ಸಿಕ್ಕರೆ, ಮಲಯಾಳಂ ವರ್ಷನ್ನಿಂದ 23 ಕೋಟಿ ರೂಪಾಯಿ ಗಳಿಕೆ ಆಗಿದೆ ಎಂದು ಬಾಕ್ಸ್ ಆಫೀಸ್ ಮೂಲಗಳು ತಿಳಿಸಿವೆ. ಎರಡನೇ ವಾರಾಂತ್ಯದ ಗಳಿಕೆಯೂ ಸೇರಿದರೆ, 'ಕಾಂತಾರ: ಚಾಪ್ಟರ್ 1' ಚಿತ್ರದ ಒಟ್ಟಾರೆ ಗಳಿಕೆ 600+ ಕೋಟಿ ದಾಟುವುದರಲ್ಲಿ ಅನುಮಾನ ಇಲ್ಲ.
ಸದ್ಯ ರಿಷಬ್ ಶೆಟ್ಟಿ ಉತ್ತರ ಭಾರತ ಪ್ರವಾಸದಲ್ಲಿದ್ದು, ಚಿತ್ರವನ್ನ ಪ್ರಮೋಟ್ ಮಾಡುತ್ತಿದ್ದಾರೆ. ಈಚೆಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಕಾಂತಾರ ಟೀಮ್ ಭೇಟಿ ಮಾಡಿದೆ. ಕಾಂತಾರ -1 ಚಿತ್ರವನ್ನು ನೋಡಿ ಖುಷಿಯಾಗಿರುವ ರೇಖಾ ಗುಪ್ತಾ, ''ಈ ಸಿನಿಮಾವು ಭಾರತದ ಆಧ್ಯಾತ್ಮಿಕ ಆಳ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸುಂದರವಾಗಿ ಪ್ರತಿಬಿಂಬಿಸಿದೆ. ನಮ್ಮ ಸಂಪ್ರದಾಯಗಳ ಸಾರವನ್ನು ಜೀವಂತಗೊಳಿಸಿದೆ'' ಎಂದು ಹೇಳಿದ್ದಾರೆ.
Kantara: Chapter 1 has taken the global box office by storm, earning an astonishing ₹425 crore in just six days and expected to cross ₹450 crore within a week of release. The film, which hit screens on October 2, is receiving overwhelming appreciation across all regions especially for its Hindi version, which is performing exceptionally well in North India.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am