ಬ್ರೇಕಿಂಗ್ ನ್ಯೂಸ್
11-10-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.11 : ಯಾವ ಸಂಪುಟ ವಿಸ್ತರಣೆಯೂ ಇಲ್ಲ. ಎಲ್ಲ ಗಾಳಿ ಸುದ್ದಿ. ಅದೆಲ್ಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಮುಖ್ಯಮಂತ್ರಿ ಅಥವಾ ನಾನು ಪ್ರಸ್ತಾಪ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲ ಎಂದಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಏನೋ ಮಾತನಾಡುತ್ತಾರೆ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನಂತೂ ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
'ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ಸುದ್ದಿ ತಿರುಚುವುದಾದರೆ, ನಾನು, ನಿಮಗೆ (ಮಾಧ್ಯಮ) ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ ಎಂದು ಹೇಳುವ ಅಗತ್ಯ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೊ ಕೊಡಲಿ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ' ಎಂದರು.
ಹೈಕಮಾಂಡ್ ಹೇಳಿದರೆ ಅಧಿಕೃತ
'ಅಧಿಕಾರ ಹಂಚಿಕೆ ಸಂಪುಟ ಪುನರ್ ರಚನೆ ಬಗ್ಗೆ ಹಾದಿಬೀದಿ ಮಾತುಗಳಿಗೆ ಮಾನ್ಯತೆ ಇಲ್ಲ. ಈ ಕುರಿತು ಹೈಕಮಾಂಡ್ ನಾಯಕರು ಹೇಳಿದರೆ ಮಾತ್ರ ಅಧಿಕೃತ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು 'ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಬೇಕು. ಅವರು ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತಾರೆ. ಬಹಿರಂಗ ಹೇಳಿಕೆ ನೀಡುವವರಿಗೆ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
Deputy Chief Minister D.K. Shivakumar has dismissed reports of a cabinet expansion in Karnataka, calling them “baseless and media-created rumours.” Speaking to reporters in Bengaluru, he asserted that neither he nor Chief Minister Siddaramaiah had discussed any such move.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm