ಬ್ರೇಕಿಂಗ್ ನ್ಯೂಸ್
11-10-25 11:03 pm Bangalore Correspondent ಕರ್ನಾಟಕ
ಬೆಂಗಳೂರು, ಅ.11 : ಯಾವ ಸಂಪುಟ ವಿಸ್ತರಣೆಯೂ ಇಲ್ಲ. ಎಲ್ಲ ಗಾಳಿ ಸುದ್ದಿ. ಅದೆಲ್ಲ ಮಾಧ್ಯಮ ಸೃಷ್ಟಿಯಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಮುಖ್ಯಮಂತ್ರಿ ಅಥವಾ ನಾನು ಪ್ರಸ್ತಾಪ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲ ಎಂದಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಏನೋ ಮಾತನಾಡುತ್ತಾರೆ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನಂತೂ ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
'ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ಸುದ್ದಿ ತಿರುಚುವುದಾದರೆ, ನಾನು, ನಿಮಗೆ (ಮಾಧ್ಯಮ) ಸಹಕಾರ ನೀಡುವುದಿಲ್ಲ. ಕಾರ್ಯಕ್ರಮಗಳಿಗೆ ಕರೆಯುವುದೂ ಇಲ್ಲ, ಮಾಧ್ಯಮಗೋಷ್ಠಿ ಕರೆಯುವುದೂ ಇಲ್ಲ ಎಂದರು.
ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ ಎಂದು ಹೇಳುವ ಅಗತ್ಯ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೊ ಕೊಡಲಿ. ಮಾಧ್ಯಮಗಳು ರಾಜಕಾರಣ ಮಾಡುವುದು ಬೇಡ' ಎಂದರು.
ಹೈಕಮಾಂಡ್ ಹೇಳಿದರೆ ಅಧಿಕೃತ
'ಅಧಿಕಾರ ಹಂಚಿಕೆ ಸಂಪುಟ ಪುನರ್ ರಚನೆ ಬಗ್ಗೆ ಹಾದಿಬೀದಿ ಮಾತುಗಳಿಗೆ ಮಾನ್ಯತೆ ಇಲ್ಲ. ಈ ಕುರಿತು ಹೈಕಮಾಂಡ್ ನಾಯಕರು ಹೇಳಿದರೆ ಮಾತ್ರ ಅಧಿಕೃತ' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು 'ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಬೇಕು. ಅವರು ಯಾವಾಗ ಮಾತನಾಡಬೇಕೋ ಆಗ ಮಾತನಾಡುತ್ತಾರೆ. ಬಹಿರಂಗ ಹೇಳಿಕೆ ನೀಡುವವರಿಗೆ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
Deputy Chief Minister D.K. Shivakumar has dismissed reports of a cabinet expansion in Karnataka, calling them “baseless and media-created rumours.” Speaking to reporters in Bengaluru, he asserted that neither he nor Chief Minister Siddaramaiah had discussed any such move.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm