ಬ್ರೇಕಿಂಗ್ ನ್ಯೂಸ್
13-10-25 03:54 pm HK News Desk ಕರ್ನಾಟಕ
ಕಣ್ಣೂರು, ಅ.13 : ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ರಾಜ್ಯ ಖಾತೆ ಸಚಿವರಾದ ಸುರೇಶ್ ಗೋಪಿ ತಮ್ಮ ಸಚಿವ ಸ್ಥಾನ ಬಿಟ್ಟುಕೊಟ್ಟು ನಟನೆಗೆ ಮರಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಸಚಿವನಾದ ಬಳಿಕ ಆದಾಯ ಮೂಲಕ್ಕೆ ಕತ್ತರಿ ಬಿದ್ದಿದೆ. ಹಾಗಾಗಿ, ಸಿನಿಮಾ ವೃತ್ತಿಯನ್ನು ಮುಂದುವರಿಸೋದಾಗಿ ಹೇಳಿದ್ದಾರೆ.
ಕಣ್ಣೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿಯ ಮೊದಲ ಬಿಜೆಪಿ ಸಂಸದ ಮತ್ತು ತ್ರಿಶ್ಶೂರ್ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುವ ಗೋಪಿ, ಸಚಿವ ಹುದ್ದೆಯನ್ನು ವಹಿಸಿಕೊಂಡ ನಂತರ ಆದಾಯ ದೊಡ್ಡ ಮಟ್ಟದಲ್ಲಿ ಕಡಿಮೆಯಾಗಿದೆ ಎಂದರಲ್ಲದೆ, ಸಿನಿಮಾ ಜೀವನವನ್ನು ತೊರೆದು ಸಚಿವನಾಗಲು ಇಷ್ಟವಿರಲಿಲ್ಲ. ಹೀಗಾಗಿ ಒಂದು ವರ್ಷದ ಬಳಿಕ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ಸಲ್ಲಿಸಿದ ನಂತರ ತೆರವಾಗುವ ಸಚಿವ ಸ್ಥಾನವನ್ನು ರಾಜ್ಯಸಭಾ ಸಂಸದ, ಕಣ್ಣೂರಿನ ಹೋರಾಟಗಾರ ಸಿ. ಸದಾನಂದನ್ ಮಾಸ್ಟರ್ ಅವರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ನಾನು ಎಂದಿಗೂ ಸಚಿವನಾಗಬೇಕೆಂದು ಪ್ರಾರ್ಥಿಸಿಲ್ಲ. ನಾನು ಸಿನಿಮಾದಲ್ಲೇ ಮುಂದುವರಿಯಲು ಬಯಸುತ್ತೇನೆ ಎಂದು ಈ ಮೊದಲೂ ಹೇಳಿದ್ದೆ. ಅಕ್ಟೋಬರ್ 2008 ರಲ್ಲಿ ಪಕ್ಷದ ಸದಸ್ಯತ್ವ ಪಡೆದು ಪ್ರಚಾರಕ್ಕೆ ಇಳಿದಿದ್ದೆ. ಪಕ್ಷವು ನನ್ನ ಮೇಲೆ ಭರವಸೆ ಇಟ್ಟು ದೊಡ್ಡ ಹುದ್ದೆಯನ್ನೇ ನೀಡಿತು ಎಂದರು.
ಸದಾನಂದನ್ ಮಾಸ್ಟರ್ 1993ರಲ್ಲಿ ಸಿಪಿಎಂ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ರಕ್ತಸಿಕ್ತ ಅಧ್ಯಾಯದ ಸಾಕ್ಷಿಯಂತಿರುವ ಸದಾನಂದ ಅವರನ್ನು ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಮಾಡಲಾಗಿತ್ತು. ಇದೀಗ ಅವರನ್ನು ಸಚಿವ ಸ್ಥಾನಕ್ಕೇರಿಸಲು ಸ್ವತಃ ನಟ, ಸಂಸದ ಸುರೇಶ್ ಗೋಪಿ ಒತ್ತಾಯಿಸಿದ್ದಾರೆ.
Actor-turned-politician and Union Minister of State for Petroleum and Natural Gas, Suresh Gopi, has expressed his desire to resign from his ministerial post and return to films. Speaking at an event in Kannur, the BJP MP from Thrissur said his income had dropped significantly after becoming a minister, prompting his decision to resume his acting career. Gopi indicated he may step down within a year and recommended that his ministerial position be given to Rajya Sabha MP C.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm