ಬ್ರೇಕಿಂಗ್ ನ್ಯೂಸ್
15-10-25 03:32 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರ ಜೊತೆಗೆ ರಘು ದೀಕ್ಷಿತ್ ಇದೇ ತಿಂಗಳ ಕೊನೆಯಲ್ಲಿ ವಿವಾಹ ಆಗಲಿದ್ದಾರೆ.
ಬಹು ಭಾಷೆಗಳಲ್ಲಿ ಜಾನಪದ ಸಂಗೀತಕ್ಕೆ ಹೆಸರು ಪಡೆದಿರುವ ಗಾಯಕ ರಘು ದೀಕ್ಷಿತ್ ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ್ತಿ, ಕೊಳಲು ವಾದಕಿ ವಾರಿಜಾಶ್ರೀ ವೇಣುಗೋಪಾಲ್ ಅವರೊಂದಿಗೆ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಮುಂದಾಗಿದ್ದಾರೆ. ಇವರ ಪ್ರೀತಿ ಪ್ರಣಯ 'ಸಾಕು ಇನ್ನೂ ಸಾಕು' ಎನ್ನುವ ಸಂಗೀತ ಆಲ್ಬಮ್ ಸಹಯೋಗದಲ್ಲಿ ಪ್ರಾರಂಭವಾಗಿತ್ತು. ಒಡನಾಟದ ಸ್ನೇಹ ಕ್ರಮೇಣ ಪ್ರೀತಿಗೆ ತಿರುಗಿತ್ತು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಘು ದೀಕ್ಷಿತ್, ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಇದೆಲ್ಲಾ ಆಕಸ್ಮಿಕವಾಗಿ ಹುಟ್ಟಿಕೊಂಡಿತು. ವಾರಿಜಾಶ್ರೀ ಅವರ ಪೋಷಕರ ಆಶೀರ್ವಾದದೊಂದಿಗೆ, ಜೀವನದ ಹೊಸ ಅಧ್ಯಾಯವನ್ನು ಒಟ್ಟಿಗೆ ಪ್ರಾರಂಭಿಸಲು ಉತ್ಸುಕರಾಗಿದ್ದೇವೆ ಎಂದು ಹೇಳಿದ್ದಾರೆ.
ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಅವರು ಸಾಕಷ್ಟು ವಿಡಿಯೊ ಸಾಂಗ್ ಆಲ್ಬಂಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಅವರು ಹಾಡಿದ್ದ 'ಭರವಸೆಯ ಬದುಕು' ವಿಡಿಯೋ ಸಾಂಗ್ ಬದುಕಿನಲ್ಲಿ ಸಾಕಷ್ಟು ನೋವುಂಡವರಿಗೆ ಆತ್ಮವಿಶ್ವಾಸ ತುಂಬಿತ್ತು. ಖ್ಯಾತ ನೃತ್ಯ ಕಲಾವಿದೆ ಮಯೂರಿ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದ ರಘು ದೀಕ್ಷಿತ್ 2019ರಲ್ಲಿ ಭಿನ್ನಾಭಿಪ್ರಾಯದಿಂದಾಗಿ ವಿಚ್ಛೇದನ ಪಡೆದಿದ್ದರು.
Renowned musician Raghu Dixit is all set to tie the knot again at the age of 50. He will marry Grammy-nominated singer and flautist Varijashree Venugopal later this month. Their bond began during the making of the music album “Saaku Innu Saaku” and gradually blossomed into love.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm