ಬ್ರೇಕಿಂಗ್ ನ್ಯೂಸ್
15-10-25 03:35 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೇ ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ - ಬೆಂಗಳೂರು- ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್ ಸಂಚಾರ ನಡೆಸಲಿದೆ.
ಹುಬ್ಬಳ್ಳಿ ಮಂಗಳೂರು ವಿಶೇಷ ರೈಲು ವೇಳಾಪಟ್ಟಿ
ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಮತ್ತು ಬಂಟವಾಳ, ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ.
ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು ಮಧ್ಯಾಹ್ನ 2:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಯಶವಂತಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19 ರಂದು ಮಧ್ಯರಾತ್ರಿ 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್- ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ಎರಡು ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ರೈಲು ಸಂಖ್ಯೆ 06507 ಬೆಳಗಾವಿ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 19:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06508, ಅಕ್ಟೋಬರ್ 18 ರಂದು 21:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 19 ರಂದು 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.
ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ: 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.
To manage the festive rush during Diwali, the South Western Railway has announced special train services connecting Mangaluru, Bengaluru, Hubballi, and Belagavi. The temporary express trains will operate between October 17 and 19, providing additional travel options for passengers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am