ಬ್ರೇಕಿಂಗ್ ನ್ಯೂಸ್
15-10-25 03:35 pm Bangalore Correspondent ಕರ್ನಾಟಕ
ಬೆಂಗಳೂರು, ಅ.15 : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈರುತ್ಯ ರೈಲ್ವೇ ಮಂಗಳೂರು- ಬೆಂಗಳೂರು ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ - ಬೆಂಗಳೂರು- ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್, ಯಶವಂತಪುರ-ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ 1 ಟ್ರಿಪ್ ಸಂಚಾರ ನಡೆಸಲಿದೆ.
ಹುಬ್ಬಳ್ಳಿ ಮಂಗಳೂರು ವಿಶೇಷ ರೈಲು ವೇಳಾಪಟ್ಟಿ
ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 17 ರಂದು ಸಂಜೆ 4 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಮರುದಿನ ಅಕ್ಟೋಬರ್ 18 ರಂದು 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಮತ್ತು ಬಂಟವಾಳ, ಮಂಗಳೂರು ಜಂಕ್ಷನ್ ನಿಲ್ದಾಣ ತಲುಪಲಿದೆ.
ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು ಮಧ್ಯಾಹ್ನ 2:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಅದೇ ದಿನ ರಾತ್ರಿ 11:15 ಗಂಟೆಗೆ ಯಶವಂತಪುರ ತಲುಪಲಿದೆ. ಈ ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ ಮತ್ತು ಕುಣಿಗಲ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಯಶವಂತಪುರ - ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19 ರಂದು ಮಧ್ಯರಾತ್ರಿ 12:15 ಗಂಟೆಗೆ ಯಶವಂತಪುರದಿಂದ ಹೊರಟು, ಅದೇ ದಿನ ಬೆಳಿಗ್ಗೆ 11:15 ಗಂಟೆಗೆ ಮಂಗಳೂರು ಜಂಕ್ಷನ್ ತಲುಪಲಿದೆ. ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್- ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 19, 2025 ರಂದು 14:35 ಗಂಟೆಗೆ ಮಂಗಳೂರು ಜಂಕ್ಷನ್ನಿಂದ ಹೊರಟು, ಮರುದಿನ 00:30 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ಎರಡು ರೈಲು ಬಂಟವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ, ಚನ್ನರಾಯಪಟ್ಟಣ, ಕುಣಿಗಲ್ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ರೈಲು ಸಂಖ್ಯೆ 06507 ಬೆಳಗಾವಿ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 18 ರಂದು 8:00 ಗಂಟೆಗೆ ಬೆಳಗಾವಿಯಿಂದ ಹೊರಟು, ಅದೇ ದಿನ ರಾತ್ರಿ 19:45 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಹಿಂದಿರುಗುವ ಸೇವೆ, ರೈಲು ಸಂಖ್ಯೆ 06508, ಅಕ್ಟೋಬರ್ 18 ರಂದು 21:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಅಕ್ಟೋಬರ್ 19 ರಂದು 08:35 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.
ಮಾರ್ಗಮಧ್ಯೆ, ಈ ರೈಲು ಎರಡೂ ದಿಕ್ಕುಗಳಲ್ಲಿ ಲೋಂಡಾ, ಅಲ್ನಾವರ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಚಿಕ್ಕಬಾಣವರ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ. ಈ ರೈಲು 19 ಬೋಗಿಗಳನ್ನು ಒಳಗೊಂಡಿರುತ್ತದೆ: 01 ಎಸಿ 2-ಟೈರ್, 03 ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, 03 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು.
To manage the festive rush during Diwali, the South Western Railway has announced special train services connecting Mangaluru, Bengaluru, Hubballi, and Belagavi. The temporary express trains will operate between October 17 and 19, providing additional travel options for passengers.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm