ಬ್ರೇಕಿಂಗ್ ನ್ಯೂಸ್
18-10-25 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.
ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ ಹೋಗಿದ್ದಳು. ರಾತ್ರಿಯಾದರೂ ಯುವಕ ಹೊರಗೆ ಬಾರದೇ ಇದ್ದುದರಿಂದ ಹೊಟೇಲ್ ಸಿಬಂದಿ ಬಾಗಿಲು ಬಡಿದಿದ್ದು ಓಪನ್ ಆಗದೇ ಇದ್ದಾಗ ಮಾಸ್ಟರ್ ಕೀ ಮೂಲಕ ಓಪನ್ ಮಾಡಿದ್ದಾರೆ.
ಆಗ ಯುವಕ ತಕ್ಷಿತ್ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿದ್ದು ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿ ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸನ್ ಆಗಿ ಮೆಡಿಕಲ್ ನಿಂದ ಮಾತ್ರೆಗಳನ್ನು ತರಿಸಿ ತಿಂದಿದ್ದಾರಂತೆ.
ತಕ್ಷಿತ್ ಹಾಗೂ ಯುವತಿ ಮಂಗಳೂರಿನ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡಿದ್ದರು ಎನ್ನಲಾಗ್ತಿದೆ. ಮೈಸೂರಿನಲ್ಲಿ ಓದೋಕೆ ಹೋಗ್ತೀನಿ ಅಂತ ಹೇಳಿ ಯುವಕ, ಲವರ್ ಜೊತೆಗೆ ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ. ಯುವಕ ದಿಢೀರ್ ಸಾವಿಗೀಡಾಗಿದ್ದು ಅನುಮಾನ ಮೂಡಿಸಿದೆ. ಹೊಟೇಲ್ ಸಿಸಿಟಿವಿ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಲಗಿದಲ್ಲೇ ಸಾವನ್ನಪ್ಪಿದ್ದರಿಂದ ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯೂ ಇದೆ. ಯುವಕ ಸಾವನ್ನಪ್ಪಿದ ಬಗ್ಗೆ ತಿಳಿದೇ ಯುವತಿ ರೂಮ್ ಬಿಟ್ಟು ಹೋಗಿದ್ದಾಳೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 20-year-old youth from Puttur, identified as Takshith, was found dead under mysterious circumstances at Grand Choice Lodge in Bengaluru’s Madiwala area. He had reportedly been staying there for eight days with his girlfriend, Rakshitha from Virajpet (Kodagu).
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 11:01 pm
Mangalore Correspondent
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
18-10-25 10:49 pm
Mangalore Correspondent
Auto Driver Assaulted, Traffic Police in Putt...
18-10-25 03:48 pm
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm