ಬ್ರೇಕಿಂಗ್ ನ್ಯೂಸ್
18-10-25 08:50 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಮಡಿವಾಳದ ಗ್ರ್ಯಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ಕಳೆದ 8 ದಿನಗಳಿಂದ ಪ್ರೇಯಸಿ ಜೊತೆ ತಂಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಯುವಕನೋರ್ವ ನಿಗೂಢ ರೀತಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ 20 ವರ್ಷದ ತಕ್ಷಿತ್ ಮೃತ ಯುವಕ.
ವಿರಾಜಪೇಟೆ ಮೂಲದ ರಕ್ಷಿತಾ ಎನ್ನುವ ಯುವತಿ ಜೊತೆ ಅ.9ರಿಂದ ಇವರು ಲಾಡ್ಜ್ನಲ್ಲಿ ರೂಂ ಮಾಡಿಕೊಂಡಿದ್ದರು. ಹೊಟೇಲ್ ರೂಮಿಗೆ ಸ್ವಿಗ್ಗಿ, ಜೊಮೆಟೋದಲ್ಲಿ ಊಟ ತರಿಸಿಕೊಂಡು ಸೇವಿಸುತ್ತಿದ್ದರು. ಅದು ಬಿಟ್ಟರೆ ಹೊರಗೆ ಹೋಗಿರಲಿಲ್ಲ. ಅ.17ರಂದು ಮಧ್ಯಾಹ್ನ ಯುವತಿ ಲಾಡ್ಜ್ ನಿಂದ ಹೊರ ಹೋಗಿದ್ದಳು. ರಾತ್ರಿಯಾದರೂ ಯುವಕ ಹೊರಗೆ ಬಾರದೇ ಇದ್ದುದರಿಂದ ಹೊಟೇಲ್ ಸಿಬಂದಿ ಬಾಗಿಲು ಬಡಿದಿದ್ದು ಓಪನ್ ಆಗದೇ ಇದ್ದಾಗ ಮಾಸ್ಟರ್ ಕೀ ಮೂಲಕ ಓಪನ್ ಮಾಡಿದ್ದಾರೆ.
ಆಗ ಯುವಕ ತಕ್ಷಿತ್ ಮಲಗಿದಲ್ಲೇ ಮೃತಪಟ್ಟಿರುವುದು ಕಂಡುಬಂದಿದ್ದು ಮಡಿವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಎಂಟು ದಿನಗಳಿಂದ ಜೋಡಿ ಸ್ವಿಗ್ಗಿಯಲ್ಲಿ ಫುಡ್ ಆರ್ಡರ್ ಮಾಡಿ ಊಟ ತರಿಸಿ ತಿಂದಿದ್ದಾರೆ. ಆದರೆ ನಿನ್ನೆ ಊಟದ ನಂತರ ಇಬ್ಬರಿಗೂ ಫುಡ್ ಪಾಯ್ಸನ್ ಆಗಿ ಮೆಡಿಕಲ್ ನಿಂದ ಮಾತ್ರೆಗಳನ್ನು ತರಿಸಿ ತಿಂದಿದ್ದಾರಂತೆ.
ತಕ್ಷಿತ್ ಹಾಗೂ ಯುವತಿ ಮಂಗಳೂರಿನ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡಿದ್ದರು ಎನ್ನಲಾಗ್ತಿದೆ. ಮೈಸೂರಿನಲ್ಲಿ ಓದೋಕೆ ಹೋಗ್ತೀನಿ ಅಂತ ಹೇಳಿ ಯುವಕ, ಲವರ್ ಜೊತೆಗೆ ಬೆಂಗಳೂರಿಗೆ ಬಂದಿದ್ದಾನೆ ಎನ್ನಲಾಗುತ್ತಿದೆ. ಯುವಕ ದಿಢೀರ್ ಸಾವಿಗೀಡಾಗಿದ್ದು ಅನುಮಾನ ಮೂಡಿಸಿದೆ. ಹೊಟೇಲ್ ಸಿಸಿಟಿವಿ ಪಡೆದಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮಲಗಿದಲ್ಲೇ ಸಾವನ್ನಪ್ಪಿದ್ದರಿಂದ ಹೃದಯಾಘಾತದಿಂದ ಸಾವು ಸಂಭವಿಸಿರುವ ಸಾಧ್ಯತೆಯೂ ಇದೆ. ಯುವಕ ಸಾವನ್ನಪ್ಪಿದ ಬಗ್ಗೆ ತಿಳಿದೇ ಯುವತಿ ರೂಮ್ ಬಿಟ್ಟು ಹೋಗಿದ್ದಾಳೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 20-year-old youth from Puttur, identified as Takshith, was found dead under mysterious circumstances at Grand Choice Lodge in Bengaluru’s Madiwala area. He had reportedly been staying there for eight days with his girlfriend, Rakshitha from Virajpet (Kodagu).
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm