ಬ್ರೇಕಿಂಗ್ ನ್ಯೂಸ್
18-10-25 09:11 pm HK News Desk ಕರ್ನಾಟಕ
ತುಮಕೂರು, ಅ.18: ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಕಡ್ಡಾಯ ಅನುಮತಿ ಪಡೆದುಕೊಳ್ಳಬೇಕೆಂಬ ಸರ್ಕಾರದ ನಿರ್ಣಯಕ್ಕೆ ಕಾಂಗ್ರೆಸ್ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎನ್. ರಾಜಣ್ಣ, ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.
ನಮಾಜ್ ಮಾಡಲು ಅನುಮತಿ ಕೇಳಿಕೊಂಡು ಮುಸ್ಲಿಮರು ಬರುತ್ತಾರೆಯೇ? ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದರೆ ಅದನ್ನು ತಡೆಯುವ ಶಕ್ತಿ ಇದೆಯೇ? ಜಾರಿ ಮಾಡಲು ಸಾಧ್ಯವಾಗುವ ಕಾನೂನನ್ನು ಜಾರಿಗೆ ತರಬೇಕೇ ಹೊರತು, ಜಾರಿ ಮಾಡಲಾಗದ ಕಾನೂನುಗಳನ್ನು ತಂದರೆ, ಅದು ಪುಸ್ತಕದಲ್ಲಿ ಮಾತ್ರವೇ ಇರುತ್ತದೆ. ಈ ನಿಯಮ ಯಾವ ಪ್ರಮಾಣದಲ್ಲಿ ಜಾರಿಗೆ ಬರುತ್ತದೆ ಕಾದು ನೋಡೋಣ ಎಂದರು.
ಇದಕ್ಕೂ ಮುನ್ನ ಜಾಗೃತ ಕರ್ನಾಟಕ ಆಯೋಜಿಸಿದ್ದ 'ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ' ವಿಚಾರಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮೀಸಲು ಕ್ಷೇತ್ರವೇ ಯಾಕೆ ಬೇಕು? ಅವರು ಸಾಮಾನ್ಯ ಕ್ಷೇತ್ರದಲ್ಲಿ ಯಾಕೆ ನಿಲ್ಲಬಾರದು? ಅವರು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ ಮೀಸಲು ಕ್ಷೇತ್ರದಿಂದ ಮತ್ತೊಬ್ಬರಿಗೆ ಅವಕಾಶ ದೊರೆಯುತ್ತದೆ ಅಲ್ಲವೇ ಎಂದು ಹೇಳಿದರು.
ಮೀಸಲು ಕ್ಷೇತ್ರ ಬಿಟ್ಟುಕೊಡುವ ಮನಃಸ್ಥಿತಿ ನಮ್ಮಲ್ಲಿ ಬರಬೇಕು. ಎಲ್ಲವನ್ನು ನಾವೇ ಬಳಸಿಕೊಂಡು ಕೂತರೆ ಬೇರೆಯವರು ಎಲ್ಲಿಗೆ ಹೋಗುತ್ತಾರೆ. ನಮ್ಮಲ್ಲಿ ಧೈರ್ಯದ ಕೊರತೆಯಿದ್ದು, ಅದು ಹೋಗಬೇಕು ಎಂದು ಪರಮೇಶ್ವರ್ ಅವರಿಗೆ ಸಲಹೆ ನೀಡಿದರು.
In a sharp criticism of the Karnataka government’s decision mandating prior permission for public events, former minister and Congress MLA K.N. Rajanna questioned the practicality of implementing such a rule. Speaking at a press conference in Tumakuru, Rajanna asked, “Do Muslims take permission to offer Namaz on roads or at Eidgah grounds? Can such activities really be stopped?”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm