ಬ್ರೇಕಿಂಗ್ ನ್ಯೂಸ್
19-10-25 05:42 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ರಾಜ್ಯಾದ್ಯಂತ ಶಾಲಾ-ಕಾಲೇಜು ಆವರಣ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಕಾರ್ಯ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ, ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸರಕಾರ ಮುಂದಾಗಿದೆ.
'ತುರ್ತು' ಎಂಬ ಶೀರ್ಷಿಕೆಯೊಂದಿಗೆ ಒಳಾಡಳಿತ ಇಲಾಖೆ ಈ ಸಂಬಂಧ ಆದೇಶ ಹೊರಡಿಸಿದ್ದು, ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ವಿವರವಾದ ಮಾರ್ಗಸೂಚಿ ಹೊರಡಿಸಲು ಕೂಡಲೇ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ಅನುಮತಿ ಪಡೆಯದೆ ಸಾರ್ವಜನಿಕ ಆಸ್ತಿಗಳನ್ನು ಯಾವುದೇ ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಬಳಕೆ ಮಾಡಿಕೊಂಡರೆ 'ಅಕ್ರಮ ಪ್ರವೇಶ' ಎಂದು ಪರಿಗಣಿಸಿ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆರೆಸ್ಸೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಉದ್ದೇಶದ ನಿಯಮ ಇದಾಗಿದ್ದರೂ ಈ ಆದೇಶದಲ್ಲಿ ಆರೆಸ್ಸೆಸ್ ಪದ ಬಳಕೆ ಮಾಡಿಲ್ಲ. ರಾಜ್ಯದಲ್ಲಿ ಹಲವು ಖಾಸಗಿ ಸಂಸ್ಥೆ ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಸದಸ್ಯರು ಮತ್ತು ಬೆಂಬಲಿಗರ ಸಭೆಗಳನ್ನು ನಡೆಸುವ ಉದ್ದೇಶಕ್ಕೆ ಸಾರ್ವಜನಿಕ ಸ್ಥಳ ಮತ್ತು ರಸ್ತೆಗಳು, ಸರಕಾರದ ಜಮೀನು, ಆಟದ ಮೈದಾನಗಳನ್ನು ಯಾವುದೇ ಪೂರ್ವಾನುಮತಿ ಪಡೆಯದೆ ಬಳಕೆ ಮಾಡಿಕೊಳ್ಳುತ್ತಿವೆ. ಇದು ಕಾನೂನು ಸುವ್ಯವಸ್ಥೆ ಹಾಗೂ ಸಾರ್ವತ್ರಿಕ ಅಸಮಾಧಾನಕ್ಕೆ ಕಾರಣವಾಗುತ್ತಿದೆ. ಇಂತಹ ಚಟುವಟಿಕೆಗಳು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆ ಉಂಟು ಮಾಡುತ್ತವೆ.
ಹಾಗಾಗಿ, ಸಂಬಂಧಿತ ಆಸ್ತಿ/ ಸ್ಥಳದ ಮಾಲೀಕತ್ವ ಹೊಂದಿದ ಸಕ್ರಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಬಳಕೆ ಮಾಡಿದರೆ ಅಕ್ರಮ ಪ್ರವೇಶ ಎಂದು ಪರಿಗಣಿಸಲಾಗುವುದು. ಅಲ್ಲದೆ, ಸಾರ್ವಜನಿಕ ಸುರಕ್ಷತೆಗೆ ಬೆದರಿಕೆ ಉಂಟು ಮಾಡುವ ಚಟುವಟಿಕೆಗಳನ್ನು ಸರಕಾರಿ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಅನುಮತಿ ನಿರಾಕರಿಸಬೇಕು ಎಂದು ಆದೇಶದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಇಲಾಖೆಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದಂತೆ ಸೂಕ್ತ ಮತ್ತು ವಿವರವಾದ ಮಾರ್ಗಸೂಚಿ ಹೊರಡಿಸಬೇಕು ಮತ್ತು ಪ್ರತಿಯನ್ನು ಒಳಾಡಳಿತ ಇಲಾಖೆಗೆ ಸಲ್ಲಿಸಬೇಕು. ಅಲ್ಲಿಯವರೆಗೆ ಸದರಿ ಆದೇಶ ಪ್ರಕಾರ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.
ಯಾರಿಗೆ ಅನುಮತಿ ಅಧಿಕಾರ ?
ಹೊಸ ಆದೇಶ ಪ್ರಕಾರ, ಶಾಲೆ, ಕಾಲೇಜು ಆವರಣಗಳಿಗೆ ಸಂಬಂಧಿಸಿದಂತೆ ಅನುಮತಿ ನೀಡುವ ಅಧಿಕಾರ ಶಿಕ್ಷಣ ಇಲಾಖೆಗೆ ಸೇರಿದೆ. ಆಟದ ಮೈದಾನ, ಪಾರ್ಕ್ ಮತ್ತು ಸಾರ್ವಜನಿಕ ಸ್ಥಳಗಳಿಗೆ ಸಂಬಂಧಿ ಸಿದಂತೆ ಅನುಮತಿ ನೀಡಲು ನಗರಾಭಿವೃದ್ಧಿ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಕ್ಷಮ ಪ್ರಾಧಿಕಾರಗಳಾಗಿರುತ್ತವೆ. ಸಾರ್ವಜನಿಕ ರಸ್ತೆಗಳು, ಸರಕಾರದ ಇತರ ಆಸ್ತಿ ಮತ್ತು ಸ್ಥಳಗಳಿಗೆ ಸಂಬಂಧಿಸಿದಂತೆ ಡಿಸಿ, ಎಸ್ಪಿ ಮತ್ತು ಪೊಲೀಸ್ ಆಯುಕ್ತರು ಸಕ್ಷಮ ಪ್ರಾಧಿಕಾರ ಎಂದು ನಿಗದಿಪಡಿಸಲಾಗಿದೆ.
The Karnataka government has issued an official order banning private organizations — including RSS activities — from using government school and college campuses, playgrounds, and other public spaces without prior permission.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm