ಬ್ರೇಕಿಂಗ್ ನ್ಯೂಸ್
20-10-25 02:56 pm HK News Desk ಕರ್ನಾಟಕ
ಕಲಬುರಗಿ, ಅ 20 : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ.
ಬೆಳಿಗ್ಗೆ ಸುಮಾರು 8:15ರ ಸುಮಾರಿಗೆ ತಾಲೂಕಿನ ಗಡಿಕೇಶ್ವರ, ಕುಪನೂರ, ಹುಡಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 3 ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಭೂಮಿಯ ಒಳಗಿನಿಂದ ಭಾರಿ ಸದ್ದು ಕೇಳಿಬಂದಿದ್ದು, ಮನೆಯಲ್ಲಿದ್ದ ಪಾತ್ರೆ ಪಗಡೆಗಳು ಅಲುಗಾಡಿವೆ. ಇದರಿಂದ ಗಾಬರಿಗೊಂಡ ಗ್ರಾಮಸ್ಥರು, ಮಕ್ಕಳು ಮತ್ತು ವೃದ್ಧರೊಂದಿಗೆ ಮನೆಯಿಂದ ಹೊರಗೆ ಬಂದು ಸುರಕ್ಷಿತ ಸ್ಥಳಗಳಿಗೆ ಓಡಿ ಹೋಗಿ ಆಶ್ರಯ ಪಡೆದರು ಎನ್ನಲಾಗಿದೆ.
2.5 ತೀವ್ರತೆ ದಾಖಲು
ಚಿಂಚೋಳಿ ತಾಲೂಕಿನಲ್ಲಿ ಭೂಕಂಪಿಸಿದ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ದೃಢಪಡಿಸಿದೆ. ಇದು ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯಲ್ಲಿ ದಾಖಲಾಗಿದೆ ಎಂದು ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದ ಬಳಿ ಪತ್ತೆಯಾಗಿದೆ.
ಪದೇ ಪದೆ ಭೂಕಂಪನ ಭೀತಿಯಲ್ಲಿ ಜನರು:
ಈ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಆಗಾಗ ಲಘು ಭೂಕಂಪನಗಳು ಸಂಭವಿಸುತ್ತಲೇ ಇದೆ. ಸೆಪ್ಟೆಂಬರ್ನಲ್ಲಿ ಭೂಕಂಪನದ ಅನುಭವವಾಗಿತ್ತು. ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುವ ಹಿನ್ನೆಲೆ, ಇದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಅದೃಷ್ಟವಶಾತ್, ಇಂದಿನ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಸೆಪ್ಟೆಂಬರ್ನಲ್ಲಿ ಭೂ ಕಂಪನ
ಸೆಪ್ಟೆಂಂಬರ್ನಲ್ಲಿ ಕಲಬುರಗಿಯಲ್ಲಿ ಲಘು ಭೂಕಂಪನದಿಂದ ಜನರ ನೆಮ್ಮದಿ ಕಸಿದಿತ್ತು. ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಸೆಪ್ಟೆಂಬರ್ 11 ಗುರುವಾರ ಬೆಳಗ್ಗೆ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿತ್ತು. ಬೆಳಗ್ಗೆ 8.18ರ ವೇಳೆ ಭೂಮಿ ಸಣ್ಣಗೆ ಕಂಪಿಸಿತ್ತು. ಚಿಂಚನಸೂರ , ಜವಳಗಾ(ಬಿ), ಲಾಡಮುಗಳಿ, ಹೊಡಲ್, ಲಿಂಗಯನವಾಡಿ, ಕೆರೆ ಅಂಬಲಗಾ , ಶ್ರೀಚಂದ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದರಿಂದ ಜನರು ಹೆದರಿ ಮನೆಯಿಂದ ಹೊರಕ್ಕೆ ಬಂದಿದ್ದರು.
On Monday morning, mild tremors were felt in several villages of Chincholi taluk in Kalaburagi district, causing panic among residents who rushed out of their homes. The quake, recorded at 2.5 magnitude on the Richter scale, lasted for about 3–4 seconds around 8:15 AM.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am