ಬ್ರೇಕಿಂಗ್ ನ್ಯೂಸ್
20-10-25 02:56 pm HK News Desk ಕರ್ನಾಟಕ
ಕಲಬುರಗಿ, ಅ 20 : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸೋಮವಾರ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ.
ಬೆಳಿಗ್ಗೆ ಸುಮಾರು 8:15ರ ಸುಮಾರಿಗೆ ತಾಲೂಕಿನ ಗಡಿಕೇಶ್ವರ, ಕುಪನೂರ, ಹುಡಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 3 ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ. ಭೂಮಿಯ ಒಳಗಿನಿಂದ ಭಾರಿ ಸದ್ದು ಕೇಳಿಬಂದಿದ್ದು, ಮನೆಯಲ್ಲಿದ್ದ ಪಾತ್ರೆ ಪಗಡೆಗಳು ಅಲುಗಾಡಿವೆ. ಇದರಿಂದ ಗಾಬರಿಗೊಂಡ ಗ್ರಾಮಸ್ಥರು, ಮಕ್ಕಳು ಮತ್ತು ವೃದ್ಧರೊಂದಿಗೆ ಮನೆಯಿಂದ ಹೊರಗೆ ಬಂದು ಸುರಕ್ಷಿತ ಸ್ಥಳಗಳಿಗೆ ಓಡಿ ಹೋಗಿ ಆಶ್ರಯ ಪಡೆದರು ಎನ್ನಲಾಗಿದೆ.
2.5 ತೀವ್ರತೆ ದಾಖಲು
ಚಿಂಚೋಳಿ ತಾಲೂಕಿನಲ್ಲಿ ಭೂಕಂಪಿಸಿದ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ದೃಢಪಡಿಸಿದೆ. ಇದು ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯಲ್ಲಿ ದಾಖಲಾಗಿದೆ ಎಂದು ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದ ಬಳಿ ಪತ್ತೆಯಾಗಿದೆ.
ಪದೇ ಪದೆ ಭೂಕಂಪನ ಭೀತಿಯಲ್ಲಿ ಜನರು:
ಈ ಭಾಗದಲ್ಲಿ ಕಳೆದ ಕೆಲವು ವರ್ಷಗಳಿಂದ ಆಗಾಗ ಲಘು ಭೂಕಂಪನಗಳು ಸಂಭವಿಸುತ್ತಲೇ ಇದೆ. ಸೆಪ್ಟೆಂಬರ್ನಲ್ಲಿ ಭೂಕಂಪನದ ಅನುಭವವಾಗಿತ್ತು. ಇಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿರುವ ಹಿನ್ನೆಲೆ, ಇದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಅದೃಷ್ಟವಶಾತ್, ಇಂದಿನ ಭೂಕಂಪದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಸೆಪ್ಟೆಂಬರ್ನಲ್ಲಿ ಭೂ ಕಂಪನ
ಸೆಪ್ಟೆಂಂಬರ್ನಲ್ಲಿ ಕಲಬುರಗಿಯಲ್ಲಿ ಲಘು ಭೂಕಂಪನದಿಂದ ಜನರ ನೆಮ್ಮದಿ ಕಸಿದಿತ್ತು. ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಸೆಪ್ಟೆಂಬರ್ 11 ಗುರುವಾರ ಬೆಳಗ್ಗೆ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿತ್ತು. ಬೆಳಗ್ಗೆ 8.18ರ ವೇಳೆ ಭೂಮಿ ಸಣ್ಣಗೆ ಕಂಪಿಸಿತ್ತು. ಚಿಂಚನಸೂರ , ಜವಳಗಾ(ಬಿ), ಲಾಡಮುಗಳಿ, ಹೊಡಲ್, ಲಿಂಗಯನವಾಡಿ, ಕೆರೆ ಅಂಬಲಗಾ , ಶ್ರೀಚಂದ ಗ್ರಾಮಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದರಿಂದ ಜನರು ಹೆದರಿ ಮನೆಯಿಂದ ಹೊರಕ್ಕೆ ಬಂದಿದ್ದರು.
On Monday morning, mild tremors were felt in several villages of Chincholi taluk in Kalaburagi district, causing panic among residents who rushed out of their homes. The quake, recorded at 2.5 magnitude on the Richter scale, lasted for about 3–4 seconds around 8:15 AM.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm