ಬ್ರೇಕಿಂಗ್ ನ್ಯೂಸ್
20-10-25 06:58 pm Bangalore Correspondent ಕರ್ನಾಟಕ
ಬೆಂಗಳೂರು, ಅ.20: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ 33,000 ಕೋಟಿ ರೂಪಾಯಿ ಮೊತ್ತದ ಕಾಮಗಾರಿ ಬಿಲ್ ಬಾಕಿಯಾಗಿದ್ದು, ತಕ್ಷಣವೇ ಪಾವತಿಸಬೇಕು. ಇಲ್ಲದಿದ್ದರೆ ಡಿಸೆಂಬರ್ ಮೊದಲ ವಾರದಿಂದ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಆರ್. ಮಂಜುನಾಥ್, "ಈ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ನಾವು ಹಣ ಬಿಡುಗಡೆಗೆ ಕೇಳುತ್ತಿದ್ದೇವೆ. ಮುಖ್ಯಮಂತ್ರಿಗಳನ್ನು 2 - 3 ಬಾರಿ ಭೇಟಿ ಆಗಿದ್ದೇವೆ. ಅವರು ಭರವಸೆ ನೀಡುತ್ತಾರೆ, ಆದರೆ ಹಣ ನೀಡುವುದಿಲ್ಲ. ಕೇವಲ ಶೇ.10 - 15ರಷ್ಟು ಹಣವನ್ನು ಮಾತ್ರ ಪಾವತಿಸುತ್ತಿದ್ದಾರೆ. ನಾವು ನವೆಂಬರ್ ಅಂತ್ಯದ ವರೆಗೆ ಕಾಯುತ್ತೇವೆ, ಆನಂತರ ಪ್ರತಿಭಟನೆ ನಡೆಸಿ ಕೆಲಸ ಸ್ಥಗಿತಗೊಳಿಸುತ್ತೇವೆ ಎಂದರು.
![]()
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ದೀಪಾವಳಿ ಹಬ್ಬದ ವರೆಗೆ ಕಾಯುವಂತೆ ಹೇಳಿದೆ ಎಂದು ಹೇಳಿದರು. ಮಂಜುನಾಥ್ ಅವರ ಪ್ರಕಾರ, ಮೇ 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ 52,000 ಕೋಟಿ ರೂ. ಬಾಕಿ ಇತ್ತು. ಈಗ ಎಂಟು ಇಲಾಖೆಗಳಿಂದ ಸುಮಾರು 33,000 ಕೋಟಿ ರೂ. ಬಾಕಿ ಇದೆ. ಸಮಾಜ ಕಲ್ಯಾಣ ಇಲಾಖೆ ಹೊರತುಪಡಿಸಿ, ಬೇರೆ ಯಾವ ಇಲಾಖೆಯೂ ಹಿರಿಯ ಗುತ್ತಿಗೆದಾರರಿಗೆ ಆದ್ಯತೆ ನೀಡುತ್ತಿಲ್ಲ ಎಂದು ಅವರು ಹೇಳಿದರು. ನಗರ ಅಭಿವೃದ್ಧಿ ಇಲಾಖೆಯು 10 ನಗರ ಮಹಾನಗರ ಪಾಲಿಕೆಗಳಲ್ಲಿ ನೀಡುತ್ತಿರುವ ಪ್ಯಾಕೇಜ್ ಟೆಂಡರ್ಗಳು ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರಿಗೆ ಅನ್ಯಾಯ ಮಾಡುತ್ತಿವೆ. ಸಚಿವರಾದ ಬೈರತಿ ಸುರೇಶ್ ಅವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ಹೇಳಿದರು. ಸಿದ್ದರಾಮಯ್ಯನವರು ಪ್ಯಾಕೇಜ್ ಟೆಂಡರ್ಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ಅತಿ ಹೆಚ್ಚು ಅಂದರೆ 12,000 ಕೋಟಿ ರೂಪಾಯಿ ಡಿಕೆ ಶಿವಕುಮಾರ್ ನಿರ್ವಹಿಸುತ್ತಿರುವ ಮಹಾ ನೀರಾವರಿ ಇಲಾಖೆಗೆ ಸೇರಿದೆ. ನಂತರ, ಪಿಡಬ್ಲ್ಯೂಡಿ ಇಲಾಖೆಯಿಂದ 9,000 ಕೋಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 3,600 ಕೋಟಿ, ಸಣ್ಣ ನೀರಾವರಿ ಇಲಾಖೆಯಿಂದ 3,200 ಕೋಟಿ, ನಗರ ಅಭಿವೃದ್ಧಿ ಇಲಾಖೆಯಿಂದ 2,000 ಕೋಟಿ, ವಸತಿ ಇಲಾಖೆಯಿಂದ 1,500 ಕೋಟಿ, ಕಾರ್ಮಿಕ ಇಲಾಖೆಯಿಂದ 800 ಕೋಟಿ ರೂಪಾಯಿಗಳು ಬಾಕಿಯಾಗಿವೆ ಎಂದು ಮಾಹಿತಿ ನೀಡಿದ್ದಾರೆ.
The Karnataka State Contractors’ Association has warned of statewide protests starting in early December if the state government fails to clear pending bills totaling ₹33,000 crore across various departments. Association president R. Manjunath said despite repeated assurances from Chief Minister Siddaramaiah, only 10–15% of payments have been released so far.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm